ಸಾರಿಗೆ ಇಲಾಖೆ ಚಾಲಕ ಆತ್ಮಹತ್ಯೆ, ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಸಿದ್ದರಾಮಯ್ಯ | JANATA NEWS

ಬೆಂಗಳೂರು : ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಂ ಅವರ 37ನೇ ಪುಣ್ಯಸ್ಮರಣೆಯ ಪ್ರಯುಕ್ತ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿ ಆತ್ಮಹತ್ಯೆ ಯತ್ನಕ್ಕೆ ಮುಂದಾದ ಚಾಲಕರು ತಮ್ಮ ಪತ್ರನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ.
ಮೃತ ಚಾಲಕರು ಡೆತ್ ನೋಟಿನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರ ರಾಜೀನಾಮೆ ಕೊಡಬೇಕು ಎಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ವಿಚಾರ ಮಾಡುತ್ತೇನೆ. ಅವರ ಪತ್ನಿ ಪಂಚಾಯತಿ ಸದಸ್ಯರು, ಅಧ್ಯಕ್ಷರಾಗುವ ಪ್ರಯತ್ನ ಮಾಡುತ್ತಿದ್ದಾರೆ. ಇಲಾಖೆ ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿದ ಕಾರಣಕ್ಕೆ ವಿಷ ಕುಡಿದಿದ್ದಾರೆ ಎಂದರು.
ಹೆಚ್.ಡಿ.ಕುಮಾರಸ್ವಾಮಿ ಅವರು ವರ್ಗಾವಣೆಗಳ ಬಗ್ಗೆ ಹತಾಶರಾಗಿದ್ದಾರೆ. ಸರ್ಕಾರ ವರ್ಗಾವಣೆ ಮಾಡಲೇಬೇಕು, ಮಾಡುತ್ತಿದೆ. ಅದಕ್ಕೆ ಧಂಧೆ ನಡೆದಿದೆ, ಲಂಚ ಪಡೆದಿದ್ದಾರೆ ಎನ್ನುವುದು ಸುಳ್ಳು ಆರೋಪ. ಅವರ ಕಾಲದಲ್ಲಿಯೂ ವರ್ಗಾವಣೆ ಆಗಿದ್ದವು. ಅವರು ದುಡ್ಡು ಪಡೆದಿದ್ದರೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಊಹೆ ಮೇಲೆ ಹೇಳಲಾಗುವುದಿಲ್ಲ. ಹೊಸ ಸರ್ಕಾರ ಬಂದಿದೆ. ವರ್ಗಾವಣೆಯನ್ನು ಆಡಳಿದ ಹಿತದೃಷ್ಟಿಯಿಂದ ಮಾಡಬೇಕು. ಮಾರ್ಚ್, ಏಪ್ರಿಲ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವರ್ಗಾವಣೆ ಆಗಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆಗಳಾಗುತ್ತಿವೆ ಎಂದರು.
ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿ ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ಮಾಡಿರುವ ಯಾವ ಆರೋಪಗಳನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ? ಎಂದು ಪ್ರಶ್ನಿಸಿದರು.