Wed,Feb04,2026
ಕನ್ನಡ / English

ಕಳೆನಾಶಕ ಸಿಂಪಡಿಸುವಾಗ ದೇಹದೊಳಗೆ ಸೇರಿ ಉಪವಲಯ ಅರಣ್ಯಾಧಿಕಾರಿ ಅನುಮಾನಾಸ್ಪದವಾಗಿ ಸಾವು

08 Jul 2023

ಕುಮಟಾ : ಗಿಡಗಳಿಗೆ ಕಳೆನಾಶಕ ಸಿಂಪಡಿಸಿದ ನಂತರ ದೇಹದೊಳಗೆ ಅಪಾಯಕಾರಿ ವಿಷ ಸೇರಿದ ಪರಿಣಾಮವಾಗಿ ಕರ್ತವ್ಯ ನಿರತ ಅರಣ್ಯಾಧಿಕಾರಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ವಿಚಿತ್ರ ಘಟನೆ ವರದಿಯಾಗಿದೆ.

ದಾಂಡೇಲಿ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಮೃತ ದುರ್ದೈವಿ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆನಾಶಕ ಸಿಂಪಡಿಸುವ ವಿಧಾನದ ಬಗ್ಗೆ ಸಾಕಷ್ಟು ಅನುಭವ ಹೊಂದಿದ್ದ ಅಧಿಕಾರಿಯೊಬ್ಬರ ಸಾವು ಹಲವಾರು ಸಂಶಯಕ್ಕೆ ಕಾರಣವಾಗಿದೆ, ಎನ್ನಲಾಗಿದೆ.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಾಡ ಗ್ರಾಮದವರಾದ ಯೋಗೇಶ್ ನಾಯ್ಕ ಅವರು ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ವಿಷಪೂರಿತ ಕೀಟ ನಾಶಕವನ್ನು ಸಹೋದ್ಯೋಗಿಗಳ ಜೊತೆ ಯೋಗೇಶ ಸಹ ಸಿಂಪಡಿಸಿದ್ದರು, ಎನ್ನಲಾಗಿದೆ.

ಕೀಟನಾಶಕ ಸಿಂಪಡಿಸಿದ ನಂತರ ಯೋಗೇಶ್ ನಾಯ್ಕ ಅವರು ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ, ಎನ್ನಲಾಗಿದೆ. ಮರುದಿನ ಯೋಗೇಶ್ ನಾಯ್ಕ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಅನಾರೋಗ್ಯ ಉಲ್ಬಣಗೊಳ್ಳುತ್ತಿದ್ದಂತೆಯೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಯೋಗೇಶ್ ನಾಯ್ಕ ಅವರನ್ನು ದಾಖಲಿಸಲಾಗಿದೆ.

ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೆಂಡತಿ ಹಾಗು ಎರಡುವರೆ ವರ್ಷದ ಪುಟ್ಟ ಮಗ ನನ್ನ ಅಗಲಿದ್ದಾರೆ. ಯೋಗೇಶ್ ನಾಯ್ಕ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ನಿನ್ನೆ ಸಂಜೆಯೆ ಮೃತಪಟ್ಟಿದ್ದ ಯೋಗೇಶ್ ನಾಯ್ಕ ಅವರ ಮೃತದೇಹವನ್ನು ಇಂದು ಶನಿವಾರ ಹುಬ್ಬಳ್ಳಿಯಿಂದ ಬೆಳಿಗ್ಗೆ 7 ಗಂಟೆಗೆ ಹಳಿಯಾಳದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಾರ್ಯಾಲಯದ ಆವರಣಕ್ಕೆ ತರಲಾಯಿತು.

ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ಹಳಿಯಾಳ ಪಟ್ಟಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

RELATED TOPICS:
English summary :Sub-Divisional forest officer suspiciously died after getting inside his body while spraying herbicide

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ

ನ್ಯೂಸ್ MORE NEWS...