Sun,Mar22,2026
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...