Sun,Jun21,2026
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...