ಯುವಕನನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ! ಐವರು ವಶಕ್ಕೆ | JANATA NEWS
ಹುಬ್ಬಳ್ಳಿ : ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಪುಂಡರು ಅಮಾನುಷವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೊಸೂರಿನ ಸಂದೀಪ್ ಸೊಲಂಕಿ ಎಂಬ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಇನ್ಸ್ಟಾ ಇನ್ಬಾಕ್ಸ್ ನಲ್ಲಿ ಬೈಯ್ದು ಮೆಸೇಜ್ ಹಾಕಿದ್ದ ಅನ್ನೋ ಕಾರಣಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತ ಸಂದೀಪ್ ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡಿದ್ದೆ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ.
ಯುವಕನ ಬಟ್ಟೆ ತೆಗೆಸಿ, ಬೆತ್ತಲೆಗೊಳಿಸಿ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿ ಅಮಾನುಷವಾಗಿ ಹಲ್ಲೆ ಮಾಡಿದ್ದು, ಯುವಕ ಅಳುತ್ತಾ ಕೈ ಮುಗಿದು ಬೇಡಿಕೊಂಡರೂ ಬಿಡದೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ರೆಕಾರ್ಡ್ ಅಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹು-ಧಾ ಆಯುಕ್ತ ಸಂತೋಷ್ ಬಾಬು, ಎರಡು ವೀಡಿಯೋ ಮೂಲಕ ನಮ್ಮ ಗಮನಕ್ಕೆ ವಿಷಯ ಬಂದಿದೆ. ಈ ಸಂಬಂಧ ಒಟ್ಟು ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಹಾಗೂ ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ ಎಂದರು.