ವಿಪಕ್ಷ ನಾಯಕನ ಆಯ್ಕೆ ವಿಚಾರ, ಪಕ್ಷ ಜು.18 ರಂದು ತೀರ್ಮಾನ ತೆಗೆದುಕೊಳ್ಳುತ್ತದೆ | JANATA NEWS
ಹಾವೇರಿ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಪಕ್ಷ ನಾಯಕ ಆಯ್ಕೆ ನಮ್ಮ ಪಕ್ಷಕ್ಕೆ ಬಿಟ್ಟಿದ್ದು, ಜು.18 ರಂದು ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಹೇಳಿದ್ದಾರೆ. ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ ಎಂದು ಹೇಳಿದರು.
ಸಚಿವ ಪ್ರೀಯಾಂಕಾ ಖರ್ಗೆ ಮತ್ತು ಮಾಜಿ ಶಾಸಕ ಯತೀಂದ್ರ ಸಿದ್ದಾರಾಮಯ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ಹಣ ತಗೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲ ಅಂತ ಜಾರಿಕೊಳ್ಳುತ್ತಿದ್ದಾರೆ. ಅವರ ಮಂತ್ರಿಮಂಡಳದ ಸದಸ್ಯರು, ಭಂಟರು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.
ಜೆಡಿಎಸ್ ಜೊತೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಅದನ್ನು ವರಿಷ್ಠರು ತಿರ್ಮಾನ ಮಾಡ್ತಾರೆ. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು.