Thu,Nov30,2023
ಕನ್ನಡ / English

ಹೊರರಾಜ್ಯಗಳ ರಾಜಕಾರಣಿಗಳ ಚಾಕರಿ ಮಾಡಲು ಐಎಎಸ್ ಅಧಿಕಾರಿಗಳು...ಪ್ರಶ್ನಿಸಿದ ಪ್ರತಿಪಕ್ಷ ಶಾಸಕರ ಅಮಾನತು.. ಪ್ರಜಾಪ್ರಭುತ್ವದ ಕಗ್ಗೊಲೆ | JANATA NEWS

19 Jul 2023
777

ಬೆಂಗಳೂರು : ಸರ್ಕಾರದ ಅಸಂವಿಧಾನಿಕ ನಡೆಯನ್ನು ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ, ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಒಂದು ದಿನದ ಹಿಂದೆ ' ಇಂಡಿಯಾ ' ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್ ಪಕ್ಷ, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ.

ನಿನ್ನೆ ಪಂಚತಾರಾ ಹೋಟೆಲಿನಲ್ಲಿ ನಡೆದ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಸಭೆಗೆ ಬಂದಿದ್ದ ಶಿಷ್ಟಾಚಾರಕ್ಕೆ ಅರ್ಹರಲ್ಲದ ಹೊರರಾಜ್ಯಗಳ ರಾಜಕಾರಣಿಗಳಿಗೆ ಚಾಕರಿ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದ ನಿರ್ಲಜ್ಜ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಹೇಯ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಪಕ್ಷ ಸರಕಾರ ಮಾಡಿದೆ.

ಈ ಅಸಂವಿಧಾನಿಕ ನಡೆಯನ್ನು ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬರೀ ನಾಲಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸುತ್ತೇನೆ ಎನ್ನುವ ಕಾಂಗ್ರೆಸ್, ತನ್ನದೇ 'ಹಸ್ತ'ದಿಂದ ಅದೇ ಪ್ರಜಾಪ್ರಭುತ್ವವನ್ನು ಅಡ್ಡಡ್ಡ ಸಿಗಿದು ನಿರ್ನಾಮ ಮಾಡುತ್ತಿದೆ. ಇದೇನಾ ಕರ್ನಾಟಕ ಮಾಡೆಲ್???

ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳನ್ನು ಸಮಾಧಾನದಿಂದ ಆಲಿಸಿ, ಉತ್ತರ ನೀಡುವುದು ನಾಗರಿಕ ಸರಕಾರದ ಕರ್ತವ್ಯ. ಆದರೆ, ಅನಾಗರಿಕತೆಯನ್ನೇ ಅರೆದು ಕುಡಿದಷ್ಟು, ಅನಾಗರಿಕತೆಯೇ ನಾಚಿ ನಿಟ್ಟುಸಿರು ಬಿಡುವಷ್ಟು ಹೀನಾಯವಾಗಿ ರಾಜ್ಯ ಕಾಂಗ್ರೆಸ್ ಸರಕಾರ ವರ್ತಿಸಿದೆ.

ಶತಮಾನಕ್ಕೂ ಹೆಚ್ಚಿನ ಇತಿಹಾಸ ನನ್ನದು ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ಪ್ರಜಾಸತ್ತೆಗೆ ಶಾಪ. ಜನತಂತ್ರದ ಮೇಲೆ ದರ್ಪ ತೋರಿಸಿದ ಆ ಪಕ್ಷಕ್ಕೆ ತಿಳಿದಿರಲಿ. ಇಂಡಿಯಾ ಎಂದರೆ ಇದಲ್ಲವೇ ಅಲ್ಲ, ಇಂಡಿಯಾ ಎಂದರೆ ಪ್ರಜಾಪ್ರಭುತ್ವ. ಇಂಡಿಯಾ ಎಂದರೆ ಇವರಷ್ಟೇ ಅಲ್ಲ, ನಾವೆಲ್ಲರೂ... , ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

English summary : IAS officers deployed to serve other state politicians...Opposition MLAs suspended who questioned this... massacre of democracy

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...