Tue,Aug04,2026
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...