Sat,Jun20,2026
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...