Wed,Feb04,2026
ಕನ್ನಡ / English

ಹಿಂದೂ ಮುಖಂಡರ ಮೇಲೆ ಪ್ರಚೋದನಕಾರಿ ಭಾಷಣ ಕೇಸ್; ಹೋರಾಟ ಹತ್ತಿಕ್ಕುವ ಪ್ರಯತ್ನ - ಶಾಸಕ ಸುವರ್ಣ | JANATA NEWS

04 Aug 2023

ಉಡುಪಿ : ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ, ಎಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿರುವ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ಹಾಗೂ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಪೋಲಿಸ್ ಇಲಾಖೆ ಕೆಲಸ ನಿರ್ವಹಿಸುತ್ತಿದ್ದು, ಪ್ರಕರಣದ ಆರಂಭದ ದಿನದಿಂದಲೂ ಸರಕಾರ ನಿರಂತರವಾಗಿ ಪೋಲಿಸ್ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದು ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದೆ. ಉಡುಪಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ಪ್ರಕರಣದ ವಿರುದ್ಧ ಜನಕ್ರೋಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹತಾಶರಾಗಿರುವ ರಾಜ್ಯ ಸರ್ಕಾರ ಪೋಲಿಸ್ ಇಲಾಖೆಯ ಮೂಲಕ ಹಿಂದೂ ಮುಖಂಡರ ಮೇಲೆ ಕೇಸ್ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ. ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ. ರಾಜ್ಯ ಸರ್ಕಾರ ಜಿಹಾದಿ ಶಕ್ತಿಗಳ ಓಲೈಕೆಗಾಗಿ ಹಿಂದೂ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ್ದು, ಇದರಿಂದ ಯಾವೊಬ್ಬ ಹಿಂದೂ ಕಾರ್ಯಕರ್ತ ಧೃತಿಗೆಡದೆ ಸಂತ್ರಸ್ಥ ವಿದ್ಯಾರ್ಥಿನಿಯರ ರಕ್ಷಣೆಗೆ ಸದಾ ಜೊತೆ ನಿಲ್ಲಲಿದ್ದಾರೆ, ಎಂದು ಯಶಪಾಲ್ ಸುವರ್ಣ ಟ್ವೀಟ್ ಮಾಡಿದ್ದಾರೆ.

English summary : Provocative speech case against Hindu leaders; Efforts to suppress the protest - MLA Suvarna

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...