Sun,Oct26,2025
ಕನ್ನಡ / English

ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತದೆ: ಲಕ್ಷ್ಮೀ ಹೆಬ್ಬಾಳಕರ್ | JANATA NEWS

27 Aug 2023

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿರುವ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವ ಕಾರ್ಯಕ್ರಮದ ಸಂಬಂಧ ಪೂರ್ವ ಸಿದ್ಧತಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದರು.

ಕಾಂಗ್ರೆಸ್ ಪಕ್ಷ ಯಾವತ್ತೂ ಹೃದಯದಿಂದ ವಿಚಾರ ಮಾಡುವ ಪಕ್ಷ. ಗ್ಯಾರಂಟಿ ಯೋಜನೆಗಳ ಮೂಲಕ ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದ್ದೇವೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

'ಗೃಹಲಕ್ಷ್ಮಿ' ಯೋಜನೆಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸರಕಾರಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಹೆಸರನ್ನು ತರಬೇಕೆಂದು ಬೆಳಗಾವಿಯಿಂದ ಮೈಸೂರಿಗೆ ಬಂದು ಈ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ಸರಕಾರ 5 ಗ್ಯಾರಂಟಿಗಳನ್ನು ಘೋಷಿಸಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರಕಾರ ಎನಿಸಿದೆ, ಸಿದ್ದರಾಮಯ್ಯ ಭಾಗ್ಯಗಳ ಸರದಾರ ಎನಿಸಿಕೊಂಡಿದ್ದಾರೆ.

ಡಿಕೆ.ಶಿವಕುಮಾರ ಅವರು ಅಪ್ರತಿಮ ಸಂಘಟಕ ಎನಿಸಿಕೊಂಡಿದ್ದಾರೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತದೆ. ಹಾಗಾಗಿಯೆ ಇಂದಿರಾ ಗಾಂಧಿ, ದೇವರಾಜ ಅರಸ ಅಂತವರನ್ನು ಇಂದಿಗೂ ಸ್ಮರಿಸುತ್ತೇವೆ. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣನವರ ತತ್ವದಲ್ಲಿ ವಿಶ್ವಾಸವಿಟ್ಟು ನಾವು ನಡೆಯುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ 100 ದಿನದಲ್ಲಿ ಇಂತಹ ಒಳ್ಳೆಯ ಬಜೆಟ್ ಕೊಟ್ಟು ಯಾವುದೇ ಅಡಚಣೆ ಮಾಡದೆ ಬಹಳ ಚೆನ್ನಾಗಿ ನಿರ್ವಹಣೆ ಮಾಡಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದಾರೆ ಎಂದು ಹೇಳಿದರು.

1.28 ಕೋಟಿ ಕುಟುಂಬಗಳಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ತಲುಪುತ್ತದೆ. ಈಗಾಗಲೆ 1.10 ಕೋಟಿ ಕುಟುಂಬಗಳು ನೊಂದಾಯಿಸಿಕೊಂಡಿವೆ. ಇನ್ನೂ ಸುಮಾರು 18 ಲಕ್ಷ ಕುಟುಂಬಗಳ ರೇಶನ್ ಕಾರ್ಡ್ ತಾಂತ್ರಿಕ ಕಾರಣದಿಂದ ಅಪ್ ಗ್ರೇಡ್ ಆಗಿಲ್ಲ. ಆದಾದರೆ ಇನ್ನೂ 18 ಲಕ್ಷ ಕುಟುಂಬಗಳು ಲಾಭ ಪಡೆಯುತ್ತವೆ. ಇದಕ್ಕೆ ಸಮಯ ಮಿತಿಯ ಇಲ್ಲ. ಯಾವಾಗ ಬೇಕಾದರೂ ರಜಿಸ್ಟ್ರೇಶನ್ ಮಾಡಿಕೊಳ್ಳಬಹುದು. ರಾಜ್ಯದ ಮೂಲೆ ಮೂಲೆಯ ಮಹಿಳೆಯರ ಸಬಲೀಕರಣ ನಮ್ಮ ಉದ್ದೇಶವಾಗಿದೆ.

ರಾಜ್ಯದ ಎಲ್ಲ ಭಾಗಗಳ ಮಹಿಳೆಯರ ಸಮಸ್ಯೆಗಳೂ ಒಂದೇ ಆಗಿದೆ. ತಿಂಗಳಿಡೀ ಪಾತ್ರೆ ತೊಳೆಯಲು ಹೋದರೂ 1,500 ರೂ ಕೊಡ್ತಾರೆ. ಉದ್ಯೋಗ ಖಾತ್ರಿಯಲ್ಲಿ 100 ದಿನ ಬೆವರು ಸುರಿಸಿ ಕೆಲಸ ಮಾಡಿದರೆ 30 ಸಾವಿರ ರೂ. ಸಿಗುತ್ತದೆ. ಕಾಂಗ್ರೆಸ್ ಉದ್ದೇಶ ತಿಂಗಳಿಗೆ 2 ಸಾವಿರ ರೂ, ವರ್ಷಕ್ಕೆ 24 ಸಾವಿರ ರೂ. ಕೊಡುವುದಾಗಿದೆ. ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದೆ ಕಾಂಗ್ರೆಸ್ ಪಕ್ಷ ಎಂದು ಅವರು ವಿವರಿಸಿದರು.

ಶಾಲೆಯೊಂದರಲ್ಲಿ ಮಗುವಿಗೆ ಮೊಟ್ಟೆ ವಿತರಿಸಿದ ಭಾವನಾತ್ಮಕ ಸಂದರ್ಭವೊಂದನ್ನು ಸಚಿವರು ಈ ವೇಳೆ ಸ್ಮರಿಸಿದರು. ಮೊಟ್ಟೆ ಪಡೆದ ಮಗು ತನ್ನ ಅಜ್ಜಿಗೂ ಒಂದು ಮೊಟ್ಟೆ ಕೊಡಿ ಎಂದು ಕೇಳಿದ ಪ್ರಸಂಗವನ್ನು ಉಲ್ಲೇಖಿಸಿದರು.

ಬಿಜೆಪಿಯವರು ನಾಲ್ಕಾಣೆ ಕೋಳಿಗೆ ಹನ್ನೆರಡಣೆ ಮಸಾಲೆ ಅರೀತಾರ. ನಾವು ಹಾಗಲ್ಲ. ಮಹಿಳೆಯರಿಗೆ ಶಕ್ತಿ ಕೊಡಲು ಈ ಎಲ್ಲ ಯೋಜನೆಗಳನ್ನು ತಂದಿದ್ದೇವೆ. ಪುರುಷರು ತಮಗೆ ಸಿಗುತ್ತಿಲ್ಲ ಎಂದು ಗೊಣಗಬೇಡಿ. ನಾವು 5 ಸಾವಿರ ವರ್ಷದಿಂದ ಅನುಭವಿಸಿದ್ದೇವೆ. ಈ ಯೋಜನೆಗಳಿಂದ ಪುರುಷರ ಜೇಬಿನಲ್ಲಿರುವ ಹಣವೂ ಉಳಿಯುತ್ತವೆ. ನಿಮಗೂ ಲಾಭ ಸಿಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲಿ ಈ ಕಾರ್ಯಕ್ರಕಮ ಮಾಡುವ ಅವಕಾಶ ಸಿಕ್ಕಿದೆ. ನನ್ನ ಪರಿಚಯವನ್ನು ಈ ಭಾಗದಲ್ಲೂ ಮಾಡಿಕೊಳ್ಳಲು ಸಿಕ್ಕಿರುವ ಅವಕಾಶ ಇದು. ನಾನು ಎಲ್ಲದರಲ್ಲೂ ಪೊಸಿಟಿವ್ ಹುಡುಕುವವನು. ಹಾಗಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. ನಿಮ್ಮೆಲ್ಲರ ಸಹಕಾರವಿರಲಿ ಎಂದು ಹೆಬ್ಬಾಳಕರ್ ಹೇಳಿದರು.

ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಶಾಸಕರ ಕೆ.ಹರೀಶ್ ಗೌಡ, ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ರೋಜಿ ಜಾನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಸುನೀತಾ ವೀರಪ್ಪ ಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್ ನಾಥ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯದ ಕುಮಾರ್, ಮೈಸೂರು ನಗರ‌ ಘಟಕದ ಅಧ್ಯಕ್ಷ ಆರ್.ಮೂರ್ತಿ‌,‌ ಮಾಜಿ ಮೇಯರ್ ಗಳಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED TOPICS:
English summary :Congress party thinks from the heart: Lakshmi Hebbalkar

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...