Wed,Feb04,2026
ಕನ್ನಡ / English

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊದಲ ವಾಣಿಜ್ಯ ದೇಶೀಯ ವಿಮಾನ | JANATA NEWS

31 Aug 2023

ಶಿವಮೊಗ್ಗ : ಮೊದಲ ವಾಣಿಜ್ಯ ದೇಶೀಯ ವಿಮಾನ ಗುರುವಾರ ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಮಾನ ನಿಲ್ದಾಣ ಉದ್ಘಾಟನೆಗೊಂಡು ಸುಮಾರು ಆರು ತಿಂಗಳುಗಳ ಬಳಿಕ ಇಂದು ಶಿವಮೊಗ್ಗದ ಜನರು ಈ ಅವಿಸ್ಮರಣೀಯ ಘಳಿಗೆಗೆ ಸಾಕ್ಷಿಯಾದರು.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ ವಿಮಾನದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಇತರ ನಾಯಕರು ಕಾಣಿಸಿಕೊಂಡಿದ್ದಾರೆ.

ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರು, ನನ್ನ ಜೀವನದ ಒಂದು ಅವಿಸ್ಮರಣೀಯ, ಸಾರ್ಥಕ ಸಂದರ್ಭ! ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷಿತ ಕನಸು ನನಸಾಗಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಧಿಕೃತವಾಗಿ ವಿಮಾನ ಹಾರಾಟ ಇಂದು ಆರಂಭವಾಗಿದೆ. ಇದರಿಂದ ಪ್ರವಾಸೋದ್ಯಮ, ಕೈಗಾರಿಕೋದ್ಯಮ ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮತ್ತು ಮಲೆನಾಡು ಭಾಗದ ಜನರ ಪ್ರಯಾಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ತಮ್ಮ ಭೂಮಿಯನ್ನು ಕೊಟ್ಟು ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಮುಖ ಕಾರಣರಾಗಿರುವ ನಮ್ಮ ರೈತರಿಗೆ ನಾನು ಆಭಾರಿಯಾಗಿದ್ದೇನೆ. ಮೊದಲ ವಿಮಾನದಲ್ಲಿ ಸಚಿವರು, ಜನಪ್ರತಿನಿಧಿಗಳ ಜೊತೆಗೆ ನಮ್ಮ ಜಿಲ್ಲೆಯ ರೈತರೊಂದಿಗೆ ಪ್ರಯಾಣಿಸಿದ್ದು ಸಾರ್ಥಕ ಸಂತಸವನ್ನು ಉಂಟುಮಾಡಿದೆ.

2020ರ ಜೂನ್ 15ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದೆ. ಈ ವರ್ಷದ ಫೆಬ್ರವರಿ 27ರ ನನ್ನ ಜನ್ಮದಿನದಂದೇ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿರವರು ಸುಸಜ್ಜಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದು, ಇಂದು ಅಧಿಕೃತವಾಗಿ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಈ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಹಾಗೂ ವಿಮಾನಯಾನದ ಸೇವೆ, ಸೌಲಭ್ಯಗಳ ಸಾಕಾರದ ನಿಟ್ಟಿನಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಜಿಲ್ಲೆಯ ಜನತೆಯ ಪರವಾಗಿ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಜನಪ್ರತಿನಿಧಿಯಾಗಿ ನಾಡಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಹಾಗೂ ನಾಡಿನ ಜನತೆಗೆ ನಾನು ಸದಾ ಋಣಿ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ ಸಿಗಬೇಕು ಎಂದರೆ ಅದಕ್ಕೆ ಅಭಿವೃದ್ಧಿಯೊಂದೇ ದಾರಿ. ಈ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ಮುಂದುವರಿಯಲಿದೆ., ಎಂದಿದ್ದಾರೆ.

RELATED TOPICS:
English summary : First commercial domestic flight landed at Shimoga airport

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ

ನ್ಯೂಸ್ MORE NEWS...