Sat,Jul27,2024
ಕನ್ನಡ / English

ಅಗ್ನಿ ಅನಾಹುತದಲ್ಲಿ ನಿಧನರಾದ ಮುಖ್ಯ ಅಭಿಯಂತರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣಕಾಸು ನೆರವು, ಸಂತಾಪ : ಮುಖ್ಯ ಆಯುಕ್ತರು | JANATA NEWS

02 Sep 2023
1124

ಬೆಂಗಳೂರು : ಬಿಬಿಎಂಪಿ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಇಂದು ಸಂತಾಪ ಸೂಚಿಸಲಾಯಿತೆಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಏರ್ಪಡಿಸಿದ್ದ ಶದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ್ ರವರ ನಿಧನದ ಹಿನ್ನೆಲೆ ಮಾನ್ಯ ಉಪ ಮುಖ್ಯಮಂತ್ರಿ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದು, ಅದರಂತೆ ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದೆಂದು ಹೇಳಿದರು.

ಪಾಲಿಕೆಯ ಇತಿಹಾಸದಲ್ಲಿ ಇಂತಹ ಘಟಣೆ ನಡೆದಿಲ್ಲ.‌ ಇದು ತುಂಬಾ ಶೋಚನೀಯ ವಿಷಯವಾಗಿದ್ದು, ಅತ್ಯಂತ ನೋವು ತರುವಂತಹ ವಿಚಾರವಾಗಿದೆ. ಅವರನ್ನು ಉಳಿಸಿಕೊಳ್ಳಲು‌ ಸಾಕಷ್ಟು ಪ್ರಯತ್ನ ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲಾ ಅಗಲಿದ್ದಾರೆ. ಇಲ್ಲಿ ಕೆಲಸ ಮಾಡುವ ಅಧಿಕಾರಿ/ಸಿಬ್ಬಂದಿಗಳು ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುತ್ತಾರೆ. ಸಂದರ್ಭಕ್ಕನುಗುಣವಾಗಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಶಿವಕುಮಾರ್ ಅಗ್ನಿ ಅವಘಡದ ಸಂದರ್ಭದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಸ್ಥಳದಲ್ಲಿದ್ದ ಅಧಿಕಾರಿ/ಸಿಬ್ಬಂದಿಯನ್ನು ಕಾಪಾಡಲು‌ ಮುಂದಾಗಿ, ಕೊನೆಯದಾಗಿ ಅವರು ಹೊರ ಬಂದಿದ್ದಾರೆ. ಅವರಿದ್ದ ಸ್ಥಾನದ ಜವಾಬ್ದಾರಿಯನ್ನು ಅರಿತು ನಾಯಕನ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸದ ನೆರವಿಗಾಗಿ 95.5 ಲಕ್ಷ ರೂ. ಮೊತ್ತ ಹಣಕಾಸು ನೆರವು:
ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ದರ್ಜೆಯ ನೌಕರರ ವೇತನದಲ್ಲಿ ಹಣವನ್ನು ಕಟಾವು ಮಾಡಿ ಸುಮಾರು 95.5 ಲಕ್ಷ ರೂ. ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಅತಿ ಶೀಘ್ರದಲ್ಲಿ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ತಿಳಿಸಿದರು.

ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ ದರ್ಜೆ ಶ್ರೇಣಿಯ ಅಧಿಕಾರಿಗಳಿಂದ 3,000 ರೂ., ಬಿ ದರ್ಜೆ ಶ್ರೇಣಿಯ ನೌಕರರಿಂದ 2,000 ರೂ., ಸಿ ದರ್ಜೆ ಶ್ರೇಣಿಯ ನೌಕರರಿಂದ 1,500 ರೂ. ಹಾಗೂ ಡಿ ದರ್ಜೆ ಶ್ರೇಣಿಯ ನೌಕರರಿಂದ 1,000 ರೂ. ಮೊತ್ತವನ್ನು ವೇತನದಲ್ಲಿ‌ ಕಟಾವು ಮಾಡಿ ಸುಮಾರು 95.5 ಲಕ್ಷ ರೂ. ಹಣವನ್ನು ಶಿವಕುಮಾರ್ ರವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಚೆಕ್ ಅನ್ನು ಹಸ್ತಾತರಿಸಲಾಗುವುದೆಂದು ತಿಳಿಸಿದರು.

ಮುಂದುವರಿದು, ಶಿವಕುಮಾರ್ ರವರ ಸವಿನೆನಪಿಗಾಗಿ ಎಲ್ಲಾ ರೀತಿಯ ಸೌಲಭ್ಯವುಳ್ಳ 2 ಆಂಬ್ಯುಲೆನ್ಸ್ ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ/ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎರಡು ತಿಂಗಳಲ್ಲಿ ಪಾಲಿಕೆಗೆ ಉಚಿತವಾಗಿ ಹಸ್ತಾಂತರಿಸಲಾಗುವುದು ಎಂದು ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ತಿಳಿಸಿದರು.

RELATED TOPICS:
English summary : Financial aid for the education of the children of the chief architect who died in the fire, condolence: Chief Commissioner

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...