Sat,Jul27,2024
ಕನ್ನಡ / English

ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ, 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ | JANATA NEWS

05 Sep 2023
1319

ಬೆಂಗಳೂರು : ದೇಶದಲ್ಲೇ ಪ್ರಪ್ರಥಮ ಭಾರಿಗೆ ನಿರ್ಮಿಸಿರುವ, 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ ಕಾರ್ಯಕ್ರಮವು ಇಂದು ಸೆಪ್ಟೆಂಬರ್ 05, 2023ರಂದು (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ 15ನೇ ಅಡ್ಡ ರಸ್ತೆ, ಮಲ್ಲೇಶ್ವರಂ ವಿಭಾಗದಲ್ಲಿ ಜರುಗಿತು.

ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಕಾರ್ಯಕ್ರಮ ಉದ್ಘಾಟಿಸಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದರು.

ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದರಡಿ ಬೆಸ್ಕಾಂ ರೂ.1.33 ಕೋಟಿ ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ. ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಸಿವಿಲ್ ಕಾಮಗಾರಿಗೆ ಬಿಬಿಎಂಪಿ ರೂ.64 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ಅಲ್ಲದೇ ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್’ಗಳು, ಫಿಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ.

RELATED TOPICS:
English summary : Inauguration of 500 KVA underground transformer station, the first of its kind in the country

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...