Wed,Feb04,2026
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ

ನ್ಯೂಸ್ MORE NEWS...