Wed,Aug05,2026
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...