Wed,Sep27,2023
ಕನ್ನಡ / English

ಬೃಹತ್ ನೀರುಗಾಲುವೆಗಳ ಒತ್ತುವರಿ : ಸಾರ್ವಜನಿಕರಿಂದ ಮಾಹಿತಿ ಕೋರಿದ ಬಿಬಿಎಂಪಿ | JANATA NEWS

17 Sep 2023
355

ಬೆಂಗಳೂರು : ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಒತ್ತುವರಿಗಳನ್ನು/ಅತಿಕ್ರಮಣಗಳನ್ನು ಗುರುತಿಸಲು ಸಾರ್ವಜನಿಕರು ಕೈಜೋಡಿಸುವಂತೆ ಹಾಗೂ ಮಾಹಿತಿಯನ್ನು ಭಾವಚಿತ್ರದೊಂದಿಗೆ ಸಲ್ಲಿಸಲು ಕೋರಲಾಗಿದೆ.

ಘನ ಉಚ್ಛ ನ್ಯಾಯಾಲಯವು WP No. 38401/2014 ದಾವೆಯಲ್ಲಿ ರಾಜಕಾಲುವೆಗಳ ಮೇಲೆ ಹೊಸದಾಗಿ ಒತ್ತುವರಿಗಳು ಇದ್ದಲ್ಲಿ ಅಂತಹ ಒತ್ತುವರಿಗಳನ್ನು ತುರ್ತಾಗಿ ಗುರುತಿಸಿ, ಸದರಿ ಒತ್ತುವರಿಗಳನ್ನು ತೆರವುಗೊಳಿಸಲು ಶೀಘ್ರವಾಗಿ ಕ್ರಮ ಕೈಗೊಳ್ಳಲು ಸೂಚಿಸಿರುತ್ತದೆ.

ಅದರಂತೆ ಕ್ರಮ ಕೈಗೊಳ್ಳಬೇಕಾಗಿದ್ದು, ಇದು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿದ್ದು, ಘನ ಸರ್ಕಾರದ ಆದೇಶ ಸಂಖ್ಯೆ: ನಅಇ 250 ಎಂಎನ್‌ವೈ 2018(ಭಾಗ-3), ಬೆಂಗಳೂರು ದಿನಾಂಕ:28.08.2023(1) ರಂತೆ ರಾಜಕಾಲುವೆಗಳ ಮೇಲೆ ಇರುವ ಒತ್ತುವರಿಗಳನ್ನು ಗುರುತಿಸಲು ಬಿಬಿಎಂಪಿ ವತಿಯಿಂದ ಕ್ರಮಕೈಗೊಳ್ಳಲಾಗುತ್ತಿರುತ್ತದೆ.

ಮುಂದುವರಿದು, ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತಗಳ ರಾಜಕಾಲುವೆಗಳಲ್ಲಿ ಒತ್ತುವರಿಗಳನ್ನು/ಅತಿಕ್ರಮಣಗಳನ್ನು ಗುರುತಿಸಲು ಸಾರ್ವಜನಿಕರು ಕೈಜೋಡಿಸಿದಲ್ಲಿ ಹೆಚ್ಚಿನ ಒತ್ತುವರಿಗಳನ್ನು ಗುರುತಿಸುವಲ್ಲಿ ಪಾಲಿಕೆಗೆ ಸಹಕಾರಿಯಾಗುತ್ತದೆ. ಸದರಿ ಒತ್ತುವರಿಗಳನ್ನು ತೆರವುಗೊಳಿಸಿಕೊಂಡು ರಾಜಕಾಲುವೆಗಳನ್ನು ನಿರ್ಮಾಣ ಮಾಡುವುದರಿಂದ ಮಳೆನೀರು ಸರಾಗವಾಗಿ ಹರಿದು ಮಳೆಗಾಲದಲ್ಲಿ ಉಂಟಾಗುವ ಪ್ರವಾಹ ಹಾನಿಯನ್ನು ತಡೆಗಟ್ಟಬಹುದಾಗಿರುತ್ತದೆ.

ಆದುದರಿಂದ ಸ್ಥಳೀಯ/ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ರಾಜಕಾಲುವೆಗಳ ಮೇಲೆ ಯಾವುದಾದರೂ ಒತ್ತುವರಿಗಳು ತಮ್ಮ ಗಮನಕ್ಕೆ ಬಂದಿದ್ದರೆ ಅಂತಹ ಒತ್ತುವರಿಗಳ ಮಾಹಿತಿಯನ್ನು ಭಾವಚಿತ್ರದೊಂದಿಗೆ ಆಯಾ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬೃಹತ್ ನೀರುಗಾಲುವೆ ರವರಿಗೆ ದಿನಾಂಕ: 20-09-2023ರ ಅಪರಾಹ್ನ 2.00 ಗಂಟೆಯ ಒಳಗಾಗಿ ಸಲ್ಲಿಸಲು ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ರವರು ಕೋರಿರುತ್ತಾರೆ.

English summary : Encroachment of major waterways: BBMP sought information from the public

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...