ಸಿಎಂ ಇಬ್ರಾಹಿಂ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರೋದಾದ್ರೆ ನಮ್ಮ ವಿರೋಧ ಇಲ್ಲ: ಡಾ.ಜಿ.ಪರಮೇಶ್ವರ್ | JANATA NEWS
![](2023/October/Jimg/1696156762.jpg)
ಬೆಂಗಳೂರು : ಸಿಎಂ ಇಬ್ರಾಹಿಂ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರೋದಾದ್ರೆ ನಮ್ಮ ವಿರೋಧ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಿಎಂ ಇಬ್ರಾಹಿಂ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಬ್ರಾಹಿಂ ಈಗಾಗಲೇ ಹೇಳಿದ್ದಾರೆ. ನನ್ನ ಗಮನಕ್ಕೆ ಬಾರದೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.ನಾನು ಅಧ್ಯಕ್ಷ ಇದ್ದೇನೆ. ನನ್ನ ಗಮನಕ್ಕೆ ಬಾರದೇ ತೀರ್ಮಾನ ಮಾಡಿಕೊಂಡಿದ್ದಾರೆ. ನನಗೆ ಬೇಸರ ಇದೆ ಅಂತ ಹೇಳಿದ್ದಾರೆ. ಅಕ್ಟೋಬರ್ 16 ಕ್ಕೆ ಸಭೆ ಕರೆದಿದ್ದೇನೆ. ಏನಾದರೂ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಅಲ್ಲಿಯವರೆಗೂ ಕಾದು ನೋಡೋಣ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಬರ್ತೇನೆ, ಮೊದಲಿನಂತೆ ಕಾಂಗ್ರೆಸ್ ನಲ್ಲಿ ಕೆಲಸ ಮಾಡ್ತೇನೆ ಎಂದರೆ ಹೈಕಮಾಂಡ್ ಒಂದು ಅವಕಾಶ ಕೊಡಬಹುದು. ಅವರು ಮರಳಿ ಬರುವುದಾದರೆ ನಾವು ವಿರೋಧ ಮಾಡುವುದಿಲ್ಲ, ಕಾಂಗ್ರೆಸ್ ಸಿದ್ದಾಂತ ಒಪ್ಪಬೇಕು ಅಷ್ಟೇ ಎಂದರು.
ಡ್ಯಾಮೇಜ್ ಮಾಡುವಂತ ಹೇಳಿಕೆಗಳು ಬರ್ತಾ ಇರುತ್ತೆ. ಆದರೆ ಏನೂ ತೊಂದರೆ ಇಲ್ಲ. ಸರ್ಕಾರ ಸುಭದ್ರವಾಗಿದೆ, ಜನ ಆಶೀರ್ವಾದ ಮಾಡಿದ್ದಾರೆ. ಕೊಟ್ಟ ಮಾತಿನಂತೆ ನಾವು ಕೆಲಸ ಮಾಡ್ತಾ ಇದ್ದೇವೆ ಸಿಎಂ, ಸಚಿವರು ಎಲ್ಲರೂ ಕೆಲಸದಲ್ಲಿ ಬ್ಯುಸಿ ಇದ್ದೇವೆ ಎಂದರು.