Wed,Aug05,2026
ಕನ್ನಡ / English

ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ | JANATA NEWS

01 Oct 2023

ರಾಮನಗರ : ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಸಂಬಂಧ ಬಿಡದಿಯ ತೋಟದ ಮನೆಯಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಘೋಷಣೆ ಮಾಡಿದರು.

ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು, ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ. ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ಬಗ್ಗೆ ಏನು ಅನ್ಯಾಯ ಆಗಿದೆ, ಅದನ್ನು ನಾನು ಸರಿ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ.

ಜಲಧಾರೆಯಲ್ಲೂ ಇದಕ್ಕೆ ಪರಿಹಾರ ಇದೆ, ಜನರು ಅವಕಾಶ ಕೊಡಲಿಲ್ಲ. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ನೀರಾವರಿ ಅನ್ಯಾಯ ಸರಿ ಮಾಡುವುದೇ ನನ್ನ ಗುರಿ. ಇದೇ ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲಾ ನೀರಾವರಿ ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಮುಸ್ಲಿಂ ಬಾಂಧವರು ಎಚ್ಚರಿಕೆಯಿಂದ ಇರಿ, ಕೆಲ ಕಾಂಗ್ರೆಸ್‌ ನಾಯಕರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಬಾಂಧವರ ಬಗ್ಗೆ ನಮ್ಮ ಕಮಿಟ್‌ಮೆಂಟ್‌ ಏನು ಅಂತ ಎಲ್ಲರಿಗೂ ಗೊತ್ತು. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದಿನ ಒಂದು ತಿಂಗಳ ಒಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಲಿದ್ದೇವೆ. ಪಕ್ಷದ ಮುಖಂಡರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವಾಗುತ್ತೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್‌ ಸಮಸ್ಯೆ ಉಂಟಾಗುವುದಿಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಈ ಬಗ್ಗೆ ಮುಕ್ತವಾಗಿ ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಯಾವ ಮುಖಂಡನ ರಾಜಕೀಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಕೆಲಸದ ಕಡೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I have not used any community for political gain

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...