Mon,May20,2024
ಕನ್ನಡ / English

ತಲ್ವಾರ್‌ ಪರ್ಮಿಷನ್‌ ಬೇಡವೇ? ಮತಾಂಧರ ಬೆನ್ನಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ - ಶಿವಮೊಗ್ಗ ಶಾಸಕರು | JANATA NEWS

02 Oct 2023
1846

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಗಲಭೆಯ ವೇಳೆ ಹಿಂದೂಗಳ ಮನೆ ಮೇಲೆ ಗುರಿಯಿಟ್ಟು ದಾಳಿ ಮಾಡಿದ್ದಾರೆ. ಪ್ರಚೋದನಕಾರಿ ಬ್ಯಾನರ್‌ ಮೂಲಕ ಮತಾಂಧರು ಶಾಂತಿ ಕದಡಿದ್ದಾರೆ ಎಂದು ಶಿವಮೊಗ್ಗ ಶಾಸಕರಾದ ಎಸ್.ಎನ್.‌ ಚೆನ್ನಬಸಪ್ಪ ಆರೋಪ ಮಾಡಿದ್ದಾರೆ.

ಪ್ರಚೋದನೆಗೆ ಏನೆಲ್ಲಾ ನಡೆದಿದೆ ಅಲ್ಲಿ, ಮುಸ್ಲಿಂ ಸಾಮ್ರಾಜ್ಯ ಎಂದು ಹಾಕಲಾಗಿದೆ. ಟಿಪ್ಪು ಬಗ್ಗೆ ಸಿಕ್ಕಾಪಟ್ಟೆ ಬ್ಯಾನರ್ ಗಳನ್ನು ಹಾಕಲಾಗಿದೆ. ಅವರಿಗೆ ಎಲ್ಲಾದಕ್ಕೂ ಪರ್ಮಿಷನ್ ಸಿಕ್ಕಿದೆ. ಭಾರತದ ಭೂಪಟದ ಮಧ್ಯ ಔರಂಗಜೇಬ್ ಅದನ್ನು ಹಸಿರು ಬಣ್ಣದಲ್ಲಿ ಹಾಕಲಾಗಿದೆ, ಎಂದು ಶಾಸಕರು ಆರೋಪ ಮಾಡಿದ್ದಾರೆ.

ಗಣೇಶ ವಿಸರ್ಜನೆಗೆ ಪರ್ಮಿಷನ್ ತೆಗೆದುಕೊಳ್ಳಬೇಕು ಹಿಂದುಗಳ ಎಲ್ಲಾ ಮೆರವಣಿಗೆಗೆ ಪರ್ಮಿಷನ್ ತೆಗೆದುಕೊಳ್ಳಬೇಕು. ಆದರೆ, ತಲ್ವಾರ್‌ ಇಡುವುದಕ್ಕೆ ಪರ್ಮಿಷನ್‌ ಬೇಡವೇ? ಮತಾಂಧರ ಬೆನ್ನಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿಂತಂತಿದೆ, ಎಂದು ಶಾಸಕರು ಹೇಳಿದ್ದಾರೆ.

ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಕೂಡ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ನೆನ್ನೆ ಈದ್ ಸಂದರ್ಭದಲ್ಲಿ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಪ್ರಚೋದನಾಕಾರಿ ಅಲಂಕಾರಗಳು-ಮೆರವಣಿಗೆಗಳು ಆಗಿದ್ದು ತೀವ್ರ ಖಂಡನೀಯ.

ಹಿಂದೆಂದೂ ಹೀಗೆ ತಲವಾರುಗಳ ಸ್ವಾಗತ ಕಮಾನುಗಳು, ಕೆರಳಿಸುವಂತಹ ಕಟೌಟುಗಳು ಶಿವಮೊಗ್ಗದಲ್ಲಿ ಕಂಡಿರಲಿಲ್ಲ.

ಇವೆಲ್ಲವೂ ತಲೆಯೆತ್ತುವವರೆಗೂ ಅಧಿಕಾರಿಗಳೇನು ಮಾಡುತ್ತಿದ್ದರು? ಸರ್ಕಾರ ಏನು ಮಾಡುತ್ತಿತ್ತು? ಗುಪ್ತಚರ ಇಲಾಖೆಗಿದು ಗೊತ್ತಾಗಲಿಲ್ಲವೆ?

ಮತೀಯವಾದದಲ್ಲಿ ಈ ಸರ್ಕಾರದ ಧೋರಣೆಯಂತೂ ನಮಗೆ ಗೊತ್ತೇ ಇದೆ; ಆದರೆ ಅಧಿಕಾರಿಗಳೂ ಇಂಥದ್ದಕ್ಕೆ ಅವಕಾಶ ಮಾಡಿಕೊಟ್ಟಿರುವುದು ನೋವಿನ ಸಂಗತಿ. ಜೊತೆಗೆ, ಗಲಭೆ ಸಂದರ್ಭದಲ್ಲಿ ರಕ್ಷಣೆಗೆ ಹೋದಂಥ ಕೆಲವು ಹಿಂದೂ ಕಾರ್ಯಕರ್ತರುಗಳ ಮೇಲೆ ವಿನಾಕಾರಣ ಕೇಸು ದಾಖಲಿಸಿರುವುದಂತೂ ಅನ್ಯಾಯದ ಪರಮಾವಧಿ.

ಅದನ್ನು ಸ್ಪಷ್ಟಪಡಿಸಿ ಮಾತುಕತೆ ಆಡುವುದಕ್ಕಾಗಿ ಶಿವಮೊಗ್ಗದ ಶಾಸಕರೂ ಸೇರಿದಂತೆ ಇವತ್ತು ನಾವೆಲ್ಲರೂ ಜಿಲ್ಲೆಯ SP ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದೆವು. ಶಾಂತಿಗೆ ಭಂಗ ಬರದ ಹಾಗೆ ಕ್ರಮ ತೆಗೆದುಕೊಳ್ಳಬೇಕು, ತಪ್ಪಿತಸ್ಥರನ್ನು ಜೈಲಿಗಟ್ಟಬೇಕು, ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಅಂತ ಒತ್ತಾಯಿಸಿ ಬಂದೆವು, ಎಂದು ಸಂಸದರು ಎಕ್ಸ್ ನಲ್ಲಿ ಹೇಳಿದ್ದಾರೆ.

English summary :Talwar permission not required? State Congress govt behind fanatics - Shimoga MLA

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...