Wed,Apr23,2025
ಕನ್ನಡ / English

4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ: ಸಿಎಂ ಸಿದ್ದರಾಮಯ್ಯ | JANATA NEWS

06 Oct 2023
1510

ಚಿತ್ರದುರ್ಗ : 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ, ಕೇಂದ್ರ ಸರ್ಕಾರ ಎಷ್ಟಾದರೂ ಬರ ಪರಿಹಾರ ಹಣವನ್ನು ಕೊಡಲಿ. ರಾಜ್ಯ ಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯ ಹಿರಿಯೂರಿನ ಬಬ್ಬೂರು ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಕೇಂದ್ರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಥಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಾಳು ಮಾಡಿದ್ದೇ ಅವರು.​ ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವುತ್ತೂ ಇಷ್ಟು ಪ್ರಮಾಣದ ಸಾಲ ಮಾಡಿರಲಿಲ್ಲ. ಹಾಗಾಗಿ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಅವರಿಗಿಲ್ಲ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. NDRF ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇನ್ನೂ 15-20 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ. ಆಗಸ್ಟ್​ ತಿಂಗಳಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಕೃಷಿ ವಿವಿ, ತೋಟಗಾರಿಕೆ ವಿವಿಗಳಲ್ಲಿ ಹೆಚ್ಚು ಸಂಶೋಧನೆ ಆಗಬೇಕು ಎಂದಿದ್ದಾರೆ.

ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.” ಎಂದು ಹೇಳಿದ್ದಾರೆ.

RELATED TOPICS:
English summary :A compensation of Rs 4,860 crore has been sought from the Centre: CM Siddaramaiah

ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ನ್ಯೂಸ್ MORE NEWS...