Mon,May20,2024
ಕನ್ನಡ / English

ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ | JANATA NEWS

29 Oct 2023
1238

ಬೆಂಗಳೂರು : ಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಜಾತಿಗಣತಿಗೆ 165 ಕೋಟಿ ರೂ. ಖರ್ಚು ಮಾಡಿದ್ದೆ ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರ ಇದ್ದಾಗ ವರದಿ ಬಿಡುಗಡೆ ಮಾಡಿದ್ರೆ ತೆಗೆದುಹಾಕ್ತೀವಿ ಅಂತಾ ಅಧಿಕಾರಿಗಳಿಗೆ ಹೆಚ್​ಡಿ ಕುಮಾರಸ್ವಾಮಿ ಹೆದರಿಸಿದ್ದರು. ನವೆಂಬರ್​ನಲ್ಲಿ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ವರದಿ ಕೊಡುತ್ತಾರೆ. ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಆಗಬೇಕಾದರೆ ಜಾತಿಗಣತಿ ಮುಖ್ಯ. 90ರ ದಶಕದಲ್ಲೇ ಜಾತಿಗಣತಿ ನಿಲ್ಲಿಸಿಬಿಟ್ಟರು. ಆಗಿನಿಂದ ಆಗಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮ ಸಮಾಜದಲ್ಲಿ ಬಹುತೇಕರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇಡೀ ನಮ್ಮೂರಿಗೆ ನಾನೇ ಮೊದಲು ಲಾಯರ್. ಅನೇಕರು ಪದವೀಧರರಾಗಿದ್ದರೂ ನಾನೇ ಲಾಯರ್.

ನಮ್ಮಪ್ಪ ಚೆನ್ನಪ್ಪಯ್ಯ ಅಂತ ಶಾನುಭೋಗರ ಮಾತನ್ನ ಬಹಳ ಕೇಳುತ್ತಿದ್ದರು. ಎಂಎಸ್ಸಿ ನನಗೆ ಸೀಟ್ ಸಿಕ್ಕಿರಲಿಲ್ಲ,‌ ಆಗ ವ್ಯವಸಾಯ ಮಾಡೋಕೆ ಹೋದೆ. ನೀನು ಕುರುಬ, ಲಾಯರ್ ಆಗಿ ಕೆಲಸ ಮಾಡೋಕೆ ಆಗುತ್ತಾ? ನಮ್ಮಪ್ಪ ಚೆನ್ನಪ್ಪಯ್ಯ ಮಾತು ಕೇಳಿ ನೀನು ಲಾ ಮಾಡ್ಬೇಡ ಅಂದ್ರು. ಆಮೇಲೆ ಪಂಚಾಯಿತಿ ಸೇರಿಸಿ ಊರಿನವರಿಗೆಲ್ಲ ಹೇಳಿದೆ. ಭಾಗ ಕೊಟ್ಟು ಬಿಡಪ್ಪ ಅಂದೆ, ಅದಕ್ಕೆ ಲಾ ಸೇರಿಸಿದರು ಎಂದು ಹೇಳಿದ್ದಾರೆ.

ನಾನು ಬಿಎಸ್​ಸಿ ಓದುವಾಗ ಹೋಟೆಲ್‌ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ತಿಳಿಸಿದರು.

RELATED TOPICS:
English summary :The Congress government has started the caste census in the entire country

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...