ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸಚಿವಾಲಯ | JANATA NEWS
ಬೆಂಗಳೂರು : ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ತೆರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಅಥವಾ ಮಾನದಂಡಗಳಿಗೆ ಅನುಗುಣವಾಗಿ ಕೇರಳ ರಾಜ್ಯದಲ್ಲಿ ಸ್ಥಾಪನೆಯಾಗಿರುವಂತೆಯೇ ಇಲ್ಲಿಯೂ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಾಗಲಿದೆ.
ಅನಿವಾಸಿ ಭಾರತೀಯರಿಗಾಗಿಯೇ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಈಗಾಗಲೇ ರಾಜ್ಯದ ಎನ್ಆರ್ಐ ಕೋಶದ ಉಪಾಧ್ಯಕ್ಷರನ್ನು ನೇಮಿಸಲಾಗಿದೆ ಎಂದರು.
ಅನಿವಾಸಿ ಭಾರತೀಯರಿಗೆ ಅನುಕೂಲವಾಗುವಂತೆ ಸೆಕ್ರೆಟರಿಯೇಟ್ ಸ್ಥಾಪಿಸುತ್ತೇವೆ. ಅವರಲ್ಲಿ ಬಹಳಷ್ಟು ಮಂದಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಅವರು ತಮ್ಮ ತಾಯ್ನಾಡು ಸಮೃದ್ಧವಾಗಿರಬೇಕೆಂದು ಬಯಸುತ್ತಾರೆ ಎಂದು ಶಿವಕುಮಾರ್ ತಿಳಿಸಿದರು.