Tue,Aug04,2026
ಕನ್ನಡ / English

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ | JANATA NEWS

05 Nov 2023

ಮೈಸೂರು : ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು.

ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ತಾಳಿದೆ, ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ.

ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರಮೋದಿ ಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

RELATED TOPICS:
English summary :CM letter to the Minister to study the drought situation and submit a report

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...