Sat,Mar15,2025
ಕನ್ನಡ / English

ಕುತೂಹಲ ಕೆರಳಿದ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ | JANATA NEWS

09 Nov 2023
1607

ಬೆಂಗಳೂರು : ರಾಜ್ಯದ ಸಿಎಂ ಕುರ್ಚಿಯ ಕುರಿತು ಚರ್ಚೆ ಹೆಚ್ಚಿರುವ ಮಧ್ಯೆ ಬೆಂಗಳೂರ ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ಮಾಡಿ ನಿನ್ನೆ ರಾತ್ರಿ ಚರ್ಚೆ ನಡೆಸಿದ್ದಾರೆ ತಮ್ಮ ಭೇಟಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿರುವ ಸಂಸದ ಸೂರ್ಯ ಅವರು ಎದ್ದಿರುವ ಎಲ್ಲಾ ಊಹಾಪೂಹಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಹೇಳಿರುವ ಸಂಸದ ಸೂರ್ಯ,

"ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿ ಶ್ರೀ @DKShivakunar ರನ್ನು ಇಂದು ಭೇಟಿಯಾಗಿ ಚರ್ಚಿಸಿದೆ.

1) ಕಳೆದ 5-6 ತಿಂಗಳುಗಳಿಂದ ಕೆ - ರೈಡ್ & ಬಿ.ಎಂ.ಆರ್.ಸಿ.ಎಲ್ ನ ಎಂ.ಡಿ ಹುದ್ದೆಗಳು ಖಾಲಿಯಿದ್ದು, ಈ ಕುರಿತು ನಾನು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದ ಬಹುಮುಖ್ಯ ಕಾಮಗಾರಿಗಳಿಗೆ ಪೂರ್ಣಾವಧಿ ಎಂ.ಡಿ ನೇಮಕದ ಅಗತ್ಯತೆ ಬಗೆಗೆ ಶ್ರೀ ಡಿ ಕೆ ಶಿವಕುಮಾರ್ ಬಳಿ ವಿವರಿಸಿದ್ದು, ಶೀಘ್ರಗತಿಯಲ್ಲಿ ಎರಡೂ ಪ್ರಾಧಿಕಾರಗಳಿಗೆ ಪೂರ್ಣಾವಧಿ ಎಂ ಡಿ ನೇಮಕಕ್ಕೆ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

2) ಬನಶಂಕರಿ ಮೆಟ್ರೋ ಸ್ಟೇಷನ್ & ಬನಶಂಕರಿ ಬಿ.ಎಂ.ಟಿ.ಸಿ ಬಸ್ ನಿಲ್ದಾಣಗಳ ಮಧ್ಯೆ ಸ್ಕೈವಾಕ್ ನಿರ್ಮಾಣಕ್ಕೆ 2019 ರಿಂದಲೂ ನಾನು ಒತ್ತಾಯಿಸುತ್ತ ಬಂದಿದ್ದು, ಸ್ಕೈ ವಾಕ್ ನಿರ್ಮಾಣದಿಂದ ಬಹು ಆಯಾಮದ ಸಂಚಾರಕ್ಕೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯು ನೀಲನಕ್ಷೆ 2019 ರಲ್ಲಿಯೇ ತಯಾರಾಗಿದ್ದು, ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆಯೂ ಕೂಡ ಒತ್ತಾಯಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುತ್ತಾರೆ.

3) #NammaMetro ಮಾರ್ಗದ 3ನೆ ಹಂತದ ಕಾಮಗಾರಿಗೆ ಹಿಂದಿನ ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದು, ಪರಿಷ್ಕೃತ ಡಿ. ಪಿ.ಆರ್ ಅನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಇನ್ನೂ ಸಲ್ಲಿಕೆಯಾಗಿರುವುದಿಲ್ಲ. ಡಿ.ಪಿ.ಆರ್ ಸಲ್ಲಿಕೆ ವಿಳಂಬದಿಂದ ನಗರದ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ ಕಾಮಗಾರಿಗಳು ವಿಳಂಬಗೊಳ್ಳುವ ಸಾಧ್ಯತೆಯ ಕುರಿತು ವಿವರಿಸಿದೆ.

4) ಮೆಟ್ರೋ 3ನೆ ಹಂತದ ಕಾಮಗಾರಿಯೊಂದಿಗೆ, ಇದೇ ಮಾರ್ಗದಲ್ಲಿ ಬಹು ಆಯಾಮದ ಫ್ಲೈ ಓವರ್ ನಿರ್ಮಾಣದಿಂದ ವೆಗಾ ಸಿಟಿ ಮಾಲ್ & ನಾಯಂಡಹಳ್ಳಿ ವರೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದರ ಕುರಿತು ಕೂಡ ಇದೇ ಸಮಯದಲ್ಲಿ ವಿವರಿಸಿದ್ದೇನೆ.

5) ನನ್ನ ಲೋಕಸಭಾ ಕ್ಷೇತ್ರದ ಹೊಸಕೆರೆ ಹಳ್ಳಿಯಲ್ಲಿ, ಅಂಡರ್ ಗ್ರೌಂಡ್ ಕೇಬಲ್ ಮೂಲಕ 66 ಕೆವಿ EHT ಲೈನ್ ಎಳೆಯುವದರಿಂದ ಚಿಕ್ಕಮಕ್ಕಳು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬಹುದು ಎಂಬುದರ ಬಗ್ಗೆ ವಿವರಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ.

6) ಬೆಂಗಳೂರು ಮಹಾನಗರದಲ್ಲಿ, ನಿಯೋಜಿತ ಟನಲ್ ರಸ್ತೆ ನಿರ್ಮಾಣದ ಬದಲಾಗಿ, ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದ್ದು, ಟನಲ್ ಬದಲು ರೈಲು ಮಾರ್ಗ ನಿರ್ಮಾಣವಾದಲ್ಲಿ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ ಎಂಬುದನ್ನು ಇದೇ ಸಂದರ್ಭದಲ್ಲಿ ವಿವರಿಸಿದ್ದು, ಈ ಸಲಹೆಗಳ ಕುರಿತು ಪರಿಶೀಲಿಸುವುದಾಗಿ ತಿಳಿಸಿರುತ್ತಾರೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕ ಸಾರಿಗೆ ಸಂಚಾರ ಉತ್ತೇಜನ ಅತೀ ದೊಡ್ಡ ಪರಿಹಾರವಾಗಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿದ್ದೇನೆ.

ನನ್ನ ಎಲ್ಲ ಮನವಿಗಳಿಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೆಂಗಳೂರಿನ ಅಭಿವೃದ್ಧಿ ಕುರಿತಾದ ಈ ಎಲ್ಲ ಕಾಮಗಾರಿಗಳ ಕುರಿತಾದ ಪರಿಷ್ಕೃತ ಮಾಹಿತಿಗಳನ್ನು ಪರಿಶೀಲಿಸುವುದರೊಂದಿಗೆ, ನಾನು ನಿಮಗೆ ನಿರಂತರವಾಗಿ ಈ ಕುರಿತಾದ ಅಪ್ಡೇಟ್ ಗಳನ್ನು ತಮಗೆ ನೀಡುತ್ತಿರುತ್ತೇನೆ.", ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Intrigued MP Tejaswi Surya met DCM DK Shivakumar

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...