Sat,Jun13,2026
ಕನ್ನಡ / English

ಕುತೂಹಲ ಕೆರಳಿದ ಸಂಸದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ | JANATA NEWS

09 Nov 2023

ಬೆಂಗಳೂರು : ರಾಜ್ಯದ ಸಿಎಂ ಕುರ್ಚಿಯ ಕುರಿತು ಚರ್ಚೆ ಹೆಚ್ಚಿರುವ ಮಧ್ಯೆ ಬೆಂಗಳೂರ ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ಮಾಡಿ ನಿನ್ನೆ ರಾತ್ರಿ ಚರ್ಚೆ ನಡೆಸಿದ್ದಾರೆ ತಮ್ಮ ಭೇಟಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿರುವ ಸಂಸದ ಸೂರ್ಯ ಅವರು ಎದ್ದಿರುವ ಎಲ್ಲಾ ಊಹಾಪೂಹಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಹೇಳಿರುವ ಸಂಸದ ಸೂರ್ಯ,

"ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿ ಶ್ರೀ @DKShivakunar ರನ್ನು ಇಂದು ಭೇಟಿಯಾಗಿ ಚರ್ಚಿಸಿದೆ.

1) ಕಳೆದ 5-6 ತಿಂಗಳುಗಳಿಂದ ಕೆ - ರೈಡ್ & ಬಿ.ಎಂ.ಆರ್.ಸಿ.ಎಲ್ ನ ಎಂ.ಡಿ ಹುದ್ದೆಗಳು ಖಾಲಿಯಿದ್ದು, ಈ ಕುರಿತು ನಾನು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದ ಬಹುಮುಖ್ಯ ಕಾಮಗಾರಿಗಳಿಗೆ ಪೂರ್ಣಾವಧಿ ಎಂ.ಡಿ ನೇಮಕದ ಅಗತ್ಯತೆ ಬಗೆಗೆ ಶ್ರೀ ಡಿ ಕೆ ಶಿವಕುಮಾರ್ ಬಳಿ ವಿವರಿಸಿದ್ದು, ಶೀಘ್ರಗತಿಯಲ್ಲಿ ಎರಡೂ ಪ್ರಾಧಿಕಾರಗಳಿಗೆ ಪೂರ್ಣಾವಧಿ ಎಂ ಡಿ ನೇಮಕಕ್ಕೆ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

2) ಬನಶಂಕರಿ ಮೆಟ್ರೋ ಸ್ಟೇಷನ್ & ಬನಶಂಕರಿ ಬಿ.ಎಂ.ಟಿ.ಸಿ ಬಸ್ ನಿಲ್ದಾಣಗಳ ಮಧ್ಯೆ ಸ್ಕೈವಾಕ್ ನಿರ್ಮಾಣಕ್ಕೆ 2019 ರಿಂದಲೂ ನಾನು ಒತ್ತಾಯಿಸುತ್ತ ಬಂದಿದ್ದು, ಸ್ಕೈ ವಾಕ್ ನಿರ್ಮಾಣದಿಂದ ಬಹು ಆಯಾಮದ ಸಂಚಾರಕ್ಕೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯು ನೀಲನಕ್ಷೆ 2019 ರಲ್ಲಿಯೇ ತಯಾರಾಗಿದ್ದು, ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆಯೂ ಕೂಡ ಒತ್ತಾಯಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುತ್ತಾರೆ.

3) #NammaMetro ಮಾರ್ಗದ 3ನೆ ಹಂತದ ಕಾಮಗಾರಿಗೆ ಹಿಂದಿನ ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದು, ಪರಿಷ್ಕೃತ ಡಿ. ಪಿ.ಆರ್ ಅನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಇನ್ನೂ ಸಲ್ಲಿಕೆಯಾಗಿರುವುದಿಲ್ಲ. ಡಿ.ಪಿ.ಆರ್ ಸಲ್ಲಿಕೆ ವಿಳಂಬದಿಂದ ನಗರದ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ ಕಾಮಗಾರಿಗಳು ವಿಳಂಬಗೊಳ್ಳುವ ಸಾಧ್ಯತೆಯ ಕುರಿತು ವಿವರಿಸಿದೆ.

4) ಮೆಟ್ರೋ 3ನೆ ಹಂತದ ಕಾಮಗಾರಿಯೊಂದಿಗೆ, ಇದೇ ಮಾರ್ಗದಲ್ಲಿ ಬಹು ಆಯಾಮದ ಫ್ಲೈ ಓವರ್ ನಿರ್ಮಾಣದಿಂದ ವೆಗಾ ಸಿಟಿ ಮಾಲ್ & ನಾಯಂಡಹಳ್ಳಿ ವರೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದರ ಕುರಿತು ಕೂಡ ಇದೇ ಸಮಯದಲ್ಲಿ ವಿವರಿಸಿದ್ದೇನೆ.

5) ನನ್ನ ಲೋಕಸಭಾ ಕ್ಷೇತ್ರದ ಹೊಸಕೆರೆ ಹಳ್ಳಿಯಲ್ಲಿ, ಅಂಡರ್ ಗ್ರೌಂಡ್ ಕೇಬಲ್ ಮೂಲಕ 66 ಕೆವಿ EHT ಲೈನ್ ಎಳೆಯುವದರಿಂದ ಚಿಕ್ಕಮಕ್ಕಳು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬಹುದು ಎಂಬುದರ ಬಗ್ಗೆ ವಿವರಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ.

6) ಬೆಂಗಳೂರು ಮಹಾನಗರದಲ್ಲಿ, ನಿಯೋಜಿತ ಟನಲ್ ರಸ್ತೆ ನಿರ್ಮಾಣದ ಬದಲಾಗಿ, ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದ್ದು, ಟನಲ್ ಬದಲು ರೈಲು ಮಾರ್ಗ ನಿರ್ಮಾಣವಾದಲ್ಲಿ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ ಎಂಬುದನ್ನು ಇದೇ ಸಂದರ್ಭದಲ್ಲಿ ವಿವರಿಸಿದ್ದು, ಈ ಸಲಹೆಗಳ ಕುರಿತು ಪರಿಶೀಲಿಸುವುದಾಗಿ ತಿಳಿಸಿರುತ್ತಾರೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕ ಸಾರಿಗೆ ಸಂಚಾರ ಉತ್ತೇಜನ ಅತೀ ದೊಡ್ಡ ಪರಿಹಾರವಾಗಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿದ್ದೇನೆ.

ನನ್ನ ಎಲ್ಲ ಮನವಿಗಳಿಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೆಂಗಳೂರಿನ ಅಭಿವೃದ್ಧಿ ಕುರಿತಾದ ಈ ಎಲ್ಲ ಕಾಮಗಾರಿಗಳ ಕುರಿತಾದ ಪರಿಷ್ಕೃತ ಮಾಹಿತಿಗಳನ್ನು ಪರಿಶೀಲಿಸುವುದರೊಂದಿಗೆ, ನಾನು ನಿಮಗೆ ನಿರಂತರವಾಗಿ ಈ ಕುರಿತಾದ ಅಪ್ಡೇಟ್ ಗಳನ್ನು ತಮಗೆ ನೀಡುತ್ತಿರುತ್ತೇನೆ.", ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Intrigued MP Tejaswi Surya met DCM DK Shivakumar

ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ : ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ಮೂವರು ಭಾರತೀಯ ನಾವಿಕರ ಸಾವಿನ ಬಗ್ಗೆ ಅಮೆರಿಕದೊಂದಿಗೆ ವಿದೇಶಾಂಗ ಮಂತ್ರಿ ಜೈಶಂಕರ್ ತೀವ್ರ ಪ್ರತಿಭಟನೆ
ಮೂವರು ಭಾರತೀಯ ನಾವಿಕರ ಸಾವಿನ ಬಗ್ಗೆ ಅಮೆರಿಕದೊಂದಿಗೆ ವಿದೇಶಾಂಗ ಮಂತ್ರಿ ಜೈಶಂಕರ್ ತೀವ್ರ ಪ್ರತಿಭಟನೆ
ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ  ಭೇಟಿಯಾದ ಡಿಕೆ.ಶಿವಕುಮಾರ
ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ ಭೇಟಿಯಾದ ಡಿಕೆ.ಶಿವಕುಮಾರ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ

ನ್ಯೂಸ್ MORE NEWS...