Sat,Mar15,2025
ಕನ್ನಡ / English

ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್ | JANATA NEWS

24 Nov 2023
1567

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಡಿ.ಕೆ.ಶಿವಕುಮಾರ್ ಮೇಲೆ ನಡೆಯುತ್ತಿದ್ದ ಸಿ.ಬಿ.ಐ ತನಿಖೆಗೆ ಸರ್ಕಾರದ ಅನುಮತಿ ಹಿಂಪಡೆಯಬೇಕೆಂದು ಸಂಪುಟಕ್ಕೆ ಶಿಫಾರಸು ಮಾಡಿದ್ದಾರೆ, ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಬಸವಣ್ಣ ಗೌಡ ಪಾಟೀಲ್ ಯತ್ನಾಳ್ ಅವರು ಗಂಭೀರ ಆರಂಭ ಮಾಡಿದ್ದಾರೆ.

"ಅಡ್ವೋಕೇಟ್ ಜನರಲ್ ಶ್ರೀ ಶಶಿಕಿರಣ್ ಶೆಟ್ಟಿ ಅವರು ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ವಕೀಲರಾಗಿ ಅವರ ಹಲವು ಭ್ರಷ್ಟಾಚಾರದ ಪ್ರಕರಣವನ್ನು ಕೈಗೆತ್ತುಕೊಂಡು ವಾದ ಮಂಡಿಸಿದ್ದರು."

"ದುರಂತದ ವಿಷಯವೇನೆಂದರೆ, ಸರ್ಕಾರದ ಪ್ರಭಾವಿ ರಾಜಕಾರಣಿಯ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಡಿ.ಕೆ.ಶಿವಕುಮಾರ್ ಮೇಲೆ ನಡೆಯುತ್ತಿದ್ದ ಸಿ.ಬಿ.ಐ ತನಿಖೆಗೆ ಸರ್ಕಾರದ ಅನುಮತಿ ಹಿಂಪಡೆಯಬೇಕೆಂದು ಸಂಪುಟಕ್ಕೆ ಶಿಫಾರಸು ಮಾಡುತ್ತಾರೆ."

"ಈ ಶಿಫಾರಸ್ಸಿನ ಕಾನೂನಿನ ಮಾನ್ಯತೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯೂ ಆಗದೆ ಅಂಗೀಕೃತವಾಗುತ್ತದೆ. ಇದು ಒಂದು ನಿಷ್ಪಕ್ಷಪಾತವಾದ ತನಿಖೆಗೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೋರಿ ಮಾಡಿದ ಪ್ರಹಸನ. ನ್ಯಾಷನಲ್ ಲಾ ಸ್ಕೂಲ್ ನ 'ಪ್ರತಿಭೆ' ಶಶಿಕಿರಣ್ ಅವರು ಈ ರೀತಿ contradictory ಆಗಿ ಜವಾಬ್ದಾರಿಗಳನ್ನು (roles ) ಮಾಡಬಾರದು."

"ಕಾನೂನು ವ್ಯವಸ್ಥೆಯ ಅಣಕ ಮಾಡುವುದು (Mockery of Justice) ಕೆಲ ಪ್ರಭಾವಿ ರಾಜಕಾರಣಿಗಳಿಗೆ ಅಭ್ಯಾಸ ಆಗಿರುವುದು ದುರಂತ. ಸಚಿವ ಸಂಪುಟದಲ್ಲಿರುವ ಯಾವುದೇ ಸಚಿವರು ಇದು ಚರ್ಚೆಯಾಗಬೇಕು ಎಂದು ಹೇಳದೆ, ಇದಕ್ಕೆ ಒಪ್ಪಿಗೆ ನೀಡಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕುತ್ತದೆ. ಇವರು ಯಾವುದೇ ತಪ್ಪು ಮಾಡಿಲ್ಲವೆಂದರೆ, ಸಿ.ಬಿ.ಐ ಮೇಲೆ ಭಯ ಏಕೆ ?"

"ರಾಜ್ಯದ ಅಧೀನದಲ್ಲಿರುವ ಪೊಲೀಸರಿಗೆ ಒಪ್ಪಿಸಿದರೆ ಒಬ್ಬ ಪ್ರಭಾವಿ ರಾಜಕಾರಣಿಯ ಕರ್ಮಕಾಂಡವನ್ನು ಸುಲಭವಾಗಿ ಮುಚ್ಚಿಹಾಕಬಹುದು ಎಂದು ಇವರ ಯೋಜನೆ ಎಂಬುದು ಗೊತ್ತಿರುವ ವಿಷಯ.
ಖಾಸಗಿ ವಕೀಲರನ್ನು ಅಡ್ವೊಕೆಟ್ ಜನರಲ್ ಹುದ್ದೆಗೆ ನೇಮಿಸಿದ್ದು ಮತ್ತು ಇದೆ ಪ್ರಕರಣವನ್ನು ಅವರು ಶಿಫಾರಸು ಮಾಡುತ್ತಾರೆ ಎಂದರೆ ಇದು Contradiction ಆಗುವುದಿಲ್ಲವೇ.," ಎಂದು ಸರಣಿ ಪೋಸ್ಟ್ ಮಾಡೋ ಮೂಲಕ ಬಿಜೆಪಿ ಶಾಸಕ ಯತ್ನಾಳ ಅವರು ಪ್ರಶ್ನಿಸಿದ್ದಾರೆ.

English summary :DK Sivakumars private lawyer recommends withdrawal of CBI probe as Advocate General - Yatnal

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...