Sun,May17,2026
ಕನ್ನಡ / English

ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ: ಸಿದ್ದರಾಮಯ್ಯ | JANATA NEWS

10 Dec 2023

ಬೆಂಗಳೂರು : ಜಾರ್ಖಂಡ್​ನ ಕಾಂಗ್ರೆಸ್​ ಸಂಸದ ಧೀರಜ್ ಪ್ರಸಾದ್ ಸಾಹು ಅವರ ನಿವಾಸ ಸೇರಿದಂತೆ ಸಂಬಂಧಿಸಿದ ಸ್ಥಳಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಕೇಂದ್ರವು ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ ಹೊರತು ಬಿಜೆಪಿಯನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ನಂತರ ಕಾಂಗ್ರೆಸ್​ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿವೆ. ಕಾಂಗ್ರೆಸ್​ ನಾಯಕರ ಮನೆ ಮೇಲೆ ನಡೆಯುವ ದಾಳಿ ಬಿಜೆಪಿಗರ ಮೇಲೆ ಏಕಿಲ್ಲ. ಅವರ ಬಳಿಯೂ ಅಕ್ರಮ ಸಂಪತ್ತು ಸಂಗ್ರಹವಾಗಿದ್ದು, ಅವರ ಮನೆಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯವರನ್ನು ಗುರಿಯಾಗಿಸಿಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರ ಮೇಲೆ ದಾಳಿ ಮಾಡಿದರೆ ಅಪಾರ ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಒಡಿಶಾ ಮೂಲದ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದಲ್ಲಿ ಇದುವರೆಗೆ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ.

ಹುಡುಕಾಟದ ಭಾಗವಾಗಿ ಸಾಹು ಅವರಿಗೆ ಸಂಬಂಧಿಸಿರುವ ಸ್ಥಳಗಳಲ್ಲಿಯೂ ಶೋಧ ನಡೆಸಲಾಯಿತು. ವಶಪಡಿಸಿಕೊಂಡ ಮೊತ್ತವು 290 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ. ಇದು ಈವರೆಗಿನ ಕಾರ್ಯಾಚರಣೆಯಲ್ಲಿ ಪತ್ತೆಯಾದ ಅತಿಹೆಚ್ಚು ಕಪ್ಪುಹಣವಾಗಿದೆ ಎಂದು ಅವರು ಹೇಳಿದರು.

ಕಪ್ಪು ಹಣವನ್ನು ಯಾರೇ ಸಂಗ್ರಹಿಸಿದ್ದರು ಅದು ತಪ್ಪು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾನೂನಿನ ಪ್ರಕಾರ ಕೆಲಸ ಮಾಡಲಿ ಱದು ಬಿಟ್ಟು ಕಾಂಗ್ರೆಸ್​ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸರಿಯಲ್ಲ ಇದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

RELATED TOPICS:
English summary :Attacks on Congress leaders houses are not on BJP side: Siddaramaiah

ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ನ್ಯೂಸ್ MORE NEWS...