Sun,May17,2026
ಕನ್ನಡ / English

ಮೋದಿ ಸರ್ಕಾರದ ಫೇಮ್‌ ಇಂಡಿಯಾ ಹಂತ-2 ಯೋಜನೆಯಿಂದ ರಾಜ್ಯಕ್ಕೆ 921 ಎಲೆಕ್ಟ್ರಿಕ್‌ ಬಸ್‌ ಗಳ ಪೈಕಿ 100 ಬಸ್ ಈಗ ಬಂದಿದೆ - ಬಿಜೆಪಿ | JANATA NEWS

27 Dec 2023

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ಫೇಮ್‌ ಇಂಡಿಯಾ ಹಂತ-2 ಭಾಗವಾಗಿ ಕರ್ನಾಟಕಕ್ಕೆ ಈ ವರ್ಷ 921 ಎಲೆಕ್ಟ್ರಿಕ್‌ ಬಸ್‌ಗಳನ್ನು ಕೊಡಲಾಗುತ್ತಿದೆ. ಅದರಲ್ಲಿ ಇದೀಗ 100 ಇವಿ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆಗೆ ಬಂದು ಸೇರಿವೆ, ಎಂದು ರಾಜ್ಯ ಬಿಜೆಪಿ ಹೇಳಿದೆ.

100 ಎಲೆಕ್ಟ್ರಿಕ್ ಬಸ್ ಗಳು ರಾಜ್ಯ ಸರ್ಕಾರದ ಕೊಡುಗೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆ ತೆಗೆದುಕೊಂಡಿರುವ ಬಿಜೆಪಿ ಪಕ್ಷವು, "ಭಂಡಗೇಡಿ ಕಾಂಗ್ರೆಸ್ ಸರ್ಕಾರ ಸೌಜನ್ಯಕ್ಕೂ ಪ್ರಧಾನಿ ಅವರಿಗೆ ಧನ್ಯವಾದಗಳನ್ನು ತಿಳಿಸದೆ ನಾನೇ ಮಾಡಿದ್ದು, ನಾನೇ ತಂದಿದ್ದು ಎಂದು ಬೀಗಿ, ಬಿಟ್ಟಿ ಪ್ರಚಾರ ಪಡೆದುಕೊಳ್ಳುತ್ತಿದೆ.", ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, "ಯಾರೋ ಹುಟ್ಟಿಸಿದ ಮಗುವಿಗೆ ನಾನೇ ಅಪ್ಪ ಎಂದು ಬೀಗಿದಂತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆ."

"ಶಕ್ತಿ ಯೋಜನೆಯನ್ನು ಅವಾಸ್ತವಿಕವಾಗಿ ಅನುಷ್ಠಾನ ಮಾಡಿ ರಾಜ್ಯದ ನಾಲ್ಕು ನಿಗಮಗಳನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರ್ಬಾದ್‌ ಮಾಡಿ ಹಾಕಿದೆ."

"ಪ್ರಯಾಣಿಕರು ಸಾರಿಗೆ ಬಸ್‌ಗಳು ಸಂಚರಿಸದೆ ಪ್ರತಿದಿನ ಹೊಡೆದಾಡಿಕೊಳ್ಳುತ್ತಿರುವುದನ್ನು ನೋಡಿ ಮಜವಾದಿ ಸರ್ಕಾರ ಮಜಾ ತೆಗೆದುಕೊಂಡಿದ್ದು ಬಿಟ್ಟರೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಿಲ್ಲ."

"ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಬದ್ಧತೆಯಿಂದ ಫೇಮ್‌ ಇಂಡಿಯಾ ಯೋಜನೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಬಜೆಟ್‌ನಲ್ಲಿ ₹10 ಸಾವಿರ ಕೋಟಿಯನ್ನು ಮೀಸಲಿಡಲಾಯಿತು."

"ಫೇಮ್‌ ಇಂಡಿಯಾ ಹಂತ-2 ಭಾಗವಾಗಿ ಕರ್ನಾಟಕಕ್ಕೆ ಈ ವರ್ಷ 921 ಎಲೆಕ್ಟ್ರಿಕ್‌ ಬಸ್‌ಗಳನ್ನು ಕೊಡಲಾಗುತ್ತಿದೆ. ಅದರಲ್ಲಿ ಇದೀಗ 100 ಇವಿ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆಗೆ ಬಂದು ಸೇರಿವೆ."

"ರಾಜ್ಯದಲ್ಲಿ ಹದಗೆಟ್ಟ ಸಾರಿಗೆ ವ್ಯವಸ್ಥೆಯನ್ನು ಸರಿದೂಗಿಸಲು ಪ್ರಧಾನಿ ಮೋದಿಯವರ ಇಚ್ಛಾಶಕ್ತಿಯ ನೆರವೇ ಬೇಕಾಯಿತು. ಆದರೆ ಭಂಡಗೇಡಿ ಕಾಂಗ್ರೆಸ್ ಸರ್ಕಾರ ಸೌಜನ್ಯಕ್ಕೂ ಪ್ರಧಾನಿ ಅವರಿಗೆ ಧನ್ಯವಾದಗಳನ್ನು ತಿಳಿಸದೆ ನಾನೇ ಮಾಡಿದ್ದು, ನಾನೇ ತಂದಿದ್ದು ಎಂದು ಬೀಗಿ, ಬಿಟ್ಟಿ ಪ್ರಚಾರ ಪಡೆದುಕೊಳ್ಳುತ್ತಿದೆ."

"ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸುಳ್ಳು ಸುದ್ದಿಯನ್ನೇ ಹರಡಿ ಟೂಲ್‌ಕಿಟ್‌ ಪ್ರಚಾರ ಪಡೆದುಕೊಳ್ಳುತ್ತಿದೆ.", ಎಂದು ವಾಗ್ದಾಳಿ ನಡೆಸಿದೆ.

English summary : Out of 921 electric buses,now 100 buses have arrived in the state from Modi govt Fame India phase-2 project - BJP

ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆ : ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳದಂತೆ ಇರಾನ್ ವಿದೇಶಾಂಗ ಸಚಿವ ಎಚ್ಚರಿಕೆ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಭದ್ರತೆಗಾಗಿ ಕೇವಲ ಒಂದು ಹೆಚ್ಚುವರಿ ಬೆಂಗಾವಲು ವಾಹನದಲ್ಲಿ ಪ್ರಯಾಣ
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಪ್ರಧಾನಿ ಮೋದಿ ಇಂಧನ ಉಳಿತಾಯ ಮನವಿ : ಸೈಕಲ್‌ನಲ್ಲಿ ನ್ಯಾಯಾಲಯಕ್ಕೆ ಬಂದ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರು
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಇರಾನ್ ಮಿಲಿಟರಿ ವಿಮಾನಗಳು ತನ್ನ ವಾಯುನೆಲೆ ಬಳಸಲು ಅವಕಾಶ ಮಾಡಿಕೊಟ್ಟ ಪಾಕಿಸ್ತಾನ : ಅಮೆರಿಕ ಬೆನ್ನಿಗೆ ಚೂರಿ
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಭಾರತ-ಬಾಂಗ್ಲಾದೇಶ ಗಡಿ ಫೆನ್ಸಿಂಗ್‌ಗಾಗಿ ಬಿಎಸ್‌ಎಫ್‌ಗೆ ಭೂ ವರ್ಗಾವಣೆ ಘೋಷಿಸಿದ ಸಿಎಂ ಸುವೇಂದು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ಹಿಮಂತ ಬಿಸ್ವಾ ಶರ್ಮಾ ರನ್ನು ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ನೇಮಿಸಿದ ಅಸ್ಸಾಂ ರಾಜ್ಯಪಾಲರು
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಮಾಣ ವಚನ ಸ್ವೀಕಾರ
 ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ನ್ಯೂಸ್ MORE NEWS...