Sat,Mar15,2025
ಕನ್ನಡ / English

ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ ಎಲ್ಲವೂ ಸಿದ್ದರಾಮಣ್ಣ ಅವರದ್ದು - ಎಚ್.ಡಿ.ಕೆ | JANATA NEWS

06 Jan 2024
1894

ಬೆಂಗಳೂರು : ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು., ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರಕರಣದ ಎಫ್.ಐ.ಆರ್.ಪ್ರತಿಯೊಂದನ್ನು ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, "ಕರ್ನಾಟಕದ 'ನೀರೋ'ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ DR. G Parameshwara ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ 'ಪರಿಪೂರ್ಣ ಸಹಕಾರ' ಕೊಡುವ ಹಾಸನ ಜಿಲ್ಲಾ ಉಸ್ತುವಾರಿ K N Rajanna ಅವರು ಸಂಸದ Pratap Simha ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ."
"ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. 'ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ' ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು."
"ಶುಕ್ರವಾರ Janata Dal Secular ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ.. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ?", ಎಂದು ಪ್ರಶ್ನಿಸಿದ್ದಾರೆ.

ವಿಷಯಕ್ಕೆ ಸಂಬಂಧಪಟ್ಟಂತೆ ಬಹಿರಂಗ ಚರ್ಚೆಗೆ ಸವಾಲೆಸೇದ ಕುಮಾರಸ್ವಾಮಿ ಅವರು, "ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡುತ್ತೀರಾ? ನಾನು ಫಿಕ್ಸ್ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ.
ಸರಿ, ವಿಕ್ರಂಸಿಂಹ ಮರ ಕಡಿದಿದ್ದರೆ FIR ನಲ್ಲಿ ಅವರ ಹೆಸರಿಲ್ಲ, ಯಾಕೆ!? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ."
"ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ?"
"ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ ₹50 ಲಕ್ಷ ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ?"
"ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ!!", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

English summary :Story, screenplay, dialogues, background music for the entire Vikramsimha score are all by Siddaramanna - HDK

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...