Sat,Aug08,2026
ಕನ್ನಡ / English

ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು...ನಿಮ್ಮ ಸ್ಥಾನಕ್ಕಾಗಲಿ ಶೋಭೆಯಲ್ಲ - ಸಿದ್ದರಾಮಯ್ಯ ಗೆ ಜೋಶಿ ಬುದ್ಧಿಮಾತು | JANATA NEWS

11 Jan 2024

ನವದೆಹಲಿ : ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರುವುದಿಲ್ಲ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು ಬುಡ್ಡಿಮಾತು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಗಣರಾಜ್ಯೋತ್ಸವದ ಸ್ತಬ್ಧಚಿತ್ರವನ್ನು ತಿರಸ್ಕಾರಗೊಂಡಿರುವ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಪ್ರಹ್ಲಾದ ಜೋಶಿ ಅವರು ಉತ್ತರಿಸಿದ್ದಾರೆ. "ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ", ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

"2007, 2009 ಹಾಗೂ 2010 ರಲ್ಲಿ ಅವಕಾಶ ಸಿಗಲಿಲ್ಲವಲ್ಲ, ಆಗ ಎಲ್ಲಿ ಹೋಗಿತ್ತು ನಿಮ್ಮ ನಾಡಪ್ರೇಮ? ಆಗ ಯಾಕೆ ಪ್ರಶ್ನಿಸಿ ಟ್ವೀಟ್ ಮಾಡಲಿಲ್ಲ, ಯಾಕೆ ಮಾಧ್ಯಮದಲ್ಲಿ ಯಾವ ಹೇಳಿಕೆಯೂ ನೀಡಲಿಲ್ಲ, ಓಹ್ ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು ಅಂತಲೇ? ಆಗ ಕರ್ನಾಟಕಕ್ಕೆ ಅವಮಾನ ಆಗಿರಲಿಲ್ಲವೇ?" ಎಂದು ಸಿದ್ದರಾಮಯ್ಯ ಅವರನ್ನು ಜೋಶಿ ಪ್ರಶ್ನಿಸಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರುವುದಿಲ್ಲ. 2015 ರಿಂದ 2023 ವರೆಗೆ ಕರ್ನಾಟಕವು ಪ್ರತಿ ವರ್ಷವೂ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ.

26 ಜನವರಿ 2024 ರ ವರೆಗೆ ಕರ್ನಾಟಕಕ್ಕೆ ಪ್ರದರ್ಶಿಸುವ 14 ಅವಕಾಶಗಳಿದ್ದವು, ಅಂದರೆ ಕೇಂದ್ರದಲ್ಲಿ ಬಿಜೆಪಿ ಇದ್ದಾಗಲೇ 10 ಬಾರಿ ಕರ್ನಾಟಕದ ಸ್ರಬ್ಧಚಿತ್ರ ಪ್ರದರ್ಶನವಾಗಿದೆ. 2007, 2009 ಹಾಗೂ 2010 ರಲ್ಲಿ ಅವಕಾಶ ಸಿಗಲಿಲ್ಲವಲ್ಲ, ಆಗ ಎಲ್ಲಿ ಹೋಗಿತ್ತು ನಿಮ್ಮ ನಾಡಪ್ರೇಮ? ಆಗ ಯಾಕೆ ಪ್ರಶ್ನಿಸಿ ಟ್ವೀಟ್ ಮಾಡಲಿಲ್ಲ, ಯಾಕೆ ಮಾಧ್ಯಮದಲ್ಲಿ ಯಾವ ಹೇಳಿಕೆಯೂ ನೀಡಲಿಲ್ಲ, ಓಹ್ ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು ಅಂತಲೇ? ಆಗ ಕರ್ನಾಟಕಕ್ಕೆ ಅವಮಾನ ಆಗಿರಲಿಲ್ಲವೇ?

ಈ ಅವಕಾಶ ಕೊಡುವುದು ನಮ್ಮ ಕೈಲಿಲ್ಲ, ಎಲ್ಲವೂ ನ್ಯಾಯ ಬದ್ಧವಾಗಿ ನಡೆದಿದೆ ಹಾಗೂ ಆಯ್ಕೆಗಾಗಿ ಆಯಾ ಕ್ಷೇತ್ರದ ಹೆಸರಾಂತ ಕಲಾವಿದರನ್ನು ಹೊಂದಿದ ಸಮಿತಿ ರಚಿಸಲಾಗಿತ್ತು. ಕೇಂದ್ರ ರಾಜ್ಯಗಳ ವಿಷಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡಲಾಗುವುದಿಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ನಮ್ಮ ಸ್ತಬ್ಧಚಿತ್ರವನ್ನು ಮೊದಲು ಪ್ರದರ್ಶನ ಮಾಡಲು ಬಿಡಲಿಲ್ಲ, ಅವಮಾನವಾಯಿತು ಎಂದು ಹೇಳುವುದು ತರವಲ್ಲ.

ರೀ ಸಿದ್ದರಾಮಯ್ಯನವರೇ, ಉಚಿತ ಕೊಡುತ್ತೇವೆ ಎಂದು ಸುಳ್ಳು ಹೇಳಿ ಕರ್ನಾಟಕ ಜನತೆಯ ದಿಕ್ಕು ತಪ್ಪಿಸಿದ್ದು ಸಾಲದು ಅಂತ ಈಗ ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ...", ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದಾರೆ.

English summary : Doing politics in everything, that too by lying...is not good for your position - Joshi advice to Siddaramaiah

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...