Wed,Jun18,2025
ಕನ್ನಡ / English

31 ವರ್ಷಗಳ ನಂತರ ಕೊನೆಗೂ ಜ್ಞಾನವಾಪಿ ಆವರಣದಲ್ಲಿ ಪೂಜೆ ಪ್ರಾರಂಭ | JANATA NEWS

01 Feb 2024

ವಾರಣಾಸಿ : ಇಂದು(ಫೆಬ್ರವರಿ 1) 31 ವರ್ಷಗಳ ನಂತರ ಕೊನೆಗೂ ಜ್ಞಾನವಾಪಿ ಆವರಣದಲ್ಲಿ ಪೂಜೆ ಪ್ರಾರಂಭವಾಯಿತು.ಹಿಂದೂಗಳ ಅರ್ಜಿಯ ಮೇರೆಗೆ ವಾರಣಾಸಿ ನ್ಯಾಯಾಲಯವು ಜ್ಞಾನವಾಪಿಯ ವ್ಯಾಸ ನೆಲಮಾಳಿಗೆಯಲ್ಲಿ ಪೂಜೆ ಮಾಡುವ ಹಕ್ಕನ್ನು ನೀಡಿದೆ.

ನಿನ್ನೆ, ಜ್ಞಾನವಾಪಿ ಮಸೀದಿ ಸಮಿತಿಯು ವಾರಣಾಸಿಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆಯನ್ನು ಪಡೆಯಲು ವಿಫಲ ಪ್ರಯತ್ನವನ್ನು ಮಾಡಿತು. ಪೂಜೆಗೆ ಅವಕಾಶ ನೀಡುವ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಜ್ಞಾನವಾಪಿಯ ವ್ಯಾಸ ನೆಲಮಾಳಿಗೆಗೆ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪೂಜೆಗೆ ಆಗಮಿಸಿದ್ದಾರೆ. ಈ ವೇಳೆ ಜಿಲ್ಲಾ ನ್ಯಾಯಾಲಯದ ಆದೇಶ ಪಾಲನೆ ಮಾಡಲಾಗಿದೆ ಎಂದು ಡಿಎಂ ಹೇಳಿದರು.

ನ್ಯಾಯಾಲಯದ ಆದೇಶದ ನಂತರ, ರಾತ್ರೋರಾತ್ರಿ ನೆಲಮಾಳಿಗೆಯಿಂದ ಬ್ಯಾರಿಕೇಡ್ಗಳನ್ನು ತೆಗೆದುಹಾಕಲಾಯಿತು. ಇದಾದ ನಂತರ ಬೆಳಗ್ಗೆಯಿಂದಲೇ ಜನರು ಪೂಜೆಗೆ ಜಮಾಯಿಸತೊಡಗಿದರು. ಬಿಗಿ ಆಡಳಿತಾತ್ಮಕ ಭದ್ರತೆಯಲ್ಲಿ ಪೂಜೆ ಆರಂಭವಾಗಿದೆ.

ಜಿಲ್ಲಾ ನ್ಯಾಯಾಲಯವು ಜನವರಿ 31 ರಂದು ಮಧ್ಯಾಹ್ನ ಆದೇಶವನ್ನು ಜಾರಿಗೊಳಿಸಿದ ಕೆಲವೇ ಗಂಟೆಗಳ ನಂತರ, ವಾರಣಾಸಿಯ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಆಡಳಿತ ಸಮಿತಿಯು ಮಸೀದಿ ಸ್ಥಳದಲ್ಲಿ ಯಥಾಸ್ಥಿತಿಯನ್ನು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ತುರ್ತು ಅರ್ಜಿಯನ್ನು ಸಲ್ಲಿಸಿತು.

ಪೂಜೆಯ ಹಕ್ಕನ್ನು ಕಾಶಿ ವಿಶ್ವನಾಥ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತ ಪ್ರತಿಷ್ಠಾಪನೆಗೆ ಶುಭ ಮುಹೂರ್ತವನ್ನು ನಿರ್ಧರಿಸಿದ ವಿಶ್ವನಾಥ ದೇವಾಲಯದ ಪ್ರಧಾನ ಅರ್ಚಕ ಓಂ ಪ್ರಕಾಶ್ ಮಿಶ್ರಾ ಮತ್ತು ಗಣೇಶ್ವರ್ ದ್ರಾವಿಡ್ ಅವರು ಬಿಯಾಸ್ ಜಿ ಅವರ ನೆಲಮಾಳಿಗೆಯಲ್ಲಿ ಪೂಜೆಯನ್ನು ನಡೆಸಿದರು.

English summary : Finally, after 31 years, Pooje has started in Gnanavapi premises

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...