Mon,Apr13,2026
ಕನ್ನಡ / English

31 ವರ್ಷಗಳ ನಂತರ ಕೊನೆಗೂ ಜ್ಞಾನವಾಪಿ ಆವರಣದಲ್ಲಿ ಪೂಜೆ ಪ್ರಾರಂಭ | JANATA NEWS

01 Feb 2024

ವಾರಣಾಸಿ : ಇಂದು(ಫೆಬ್ರವರಿ 1) 31 ವರ್ಷಗಳ ನಂತರ ಕೊನೆಗೂ ಜ್ಞಾನವಾಪಿ ಆವರಣದಲ್ಲಿ ಪೂಜೆ ಪ್ರಾರಂಭವಾಯಿತು.ಹಿಂದೂಗಳ ಅರ್ಜಿಯ ಮೇರೆಗೆ ವಾರಣಾಸಿ ನ್ಯಾಯಾಲಯವು ಜ್ಞಾನವಾಪಿಯ ವ್ಯಾಸ ನೆಲಮಾಳಿಗೆಯಲ್ಲಿ ಪೂಜೆ ಮಾಡುವ ಹಕ್ಕನ್ನು ನೀಡಿದೆ.

ನಿನ್ನೆ, ಜ್ಞಾನವಾಪಿ ಮಸೀದಿ ಸಮಿತಿಯು ವಾರಣಾಸಿಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆಯನ್ನು ಪಡೆಯಲು ವಿಫಲ ಪ್ರಯತ್ನವನ್ನು ಮಾಡಿತು. ಪೂಜೆಗೆ ಅವಕಾಶ ನೀಡುವ ಆದೇಶದ ವಿರುದ್ಧ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಜ್ಞಾನವಾಪಿಯ ವ್ಯಾಸ ನೆಲಮಾಳಿಗೆಗೆ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪೂಜೆಗೆ ಆಗಮಿಸಿದ್ದಾರೆ. ಈ ವೇಳೆ ಜಿಲ್ಲಾ ನ್ಯಾಯಾಲಯದ ಆದೇಶ ಪಾಲನೆ ಮಾಡಲಾಗಿದೆ ಎಂದು ಡಿಎಂ ಹೇಳಿದರು.

ನ್ಯಾಯಾಲಯದ ಆದೇಶದ ನಂತರ, ರಾತ್ರೋರಾತ್ರಿ ನೆಲಮಾಳಿಗೆಯಿಂದ ಬ್ಯಾರಿಕೇಡ್ಗಳನ್ನು ತೆಗೆದುಹಾಕಲಾಯಿತು. ಇದಾದ ನಂತರ ಬೆಳಗ್ಗೆಯಿಂದಲೇ ಜನರು ಪೂಜೆಗೆ ಜಮಾಯಿಸತೊಡಗಿದರು. ಬಿಗಿ ಆಡಳಿತಾತ್ಮಕ ಭದ್ರತೆಯಲ್ಲಿ ಪೂಜೆ ಆರಂಭವಾಗಿದೆ.

ಜಿಲ್ಲಾ ನ್ಯಾಯಾಲಯವು ಜನವರಿ 31 ರಂದು ಮಧ್ಯಾಹ್ನ ಆದೇಶವನ್ನು ಜಾರಿಗೊಳಿಸಿದ ಕೆಲವೇ ಗಂಟೆಗಳ ನಂತರ, ವಾರಣಾಸಿಯ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಆಡಳಿತ ಸಮಿತಿಯು ಮಸೀದಿ ಸ್ಥಳದಲ್ಲಿ ಯಥಾಸ್ಥಿತಿಯನ್ನು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ತುರ್ತು ಅರ್ಜಿಯನ್ನು ಸಲ್ಲಿಸಿತು.

ಪೂಜೆಯ ಹಕ್ಕನ್ನು ಕಾಶಿ ವಿಶ್ವನಾಥ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತ ಪ್ರತಿಷ್ಠಾಪನೆಗೆ ಶುಭ ಮುಹೂರ್ತವನ್ನು ನಿರ್ಧರಿಸಿದ ವಿಶ್ವನಾಥ ದೇವಾಲಯದ ಪ್ರಧಾನ ಅರ್ಚಕ ಓಂ ಪ್ರಕಾಶ್ ಮಿಶ್ರಾ ಮತ್ತು ಗಣೇಶ್ವರ್ ದ್ರಾವಿಡ್ ಅವರು ಬಿಯಾಸ್ ಜಿ ಅವರ ನೆಲಮಾಳಿಗೆಯಲ್ಲಿ ಪೂಜೆಯನ್ನು ನಡೆಸಿದರು.

English summary : Finally, after 31 years, Pooje has started in Gnanavapi premises

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು

ನ್ಯೂಸ್ MORE NEWS...