Wed,Jul15,2026
ಕನ್ನಡ / English

ಪಾಕಿಸ್ತಾನ ಪರ ಜಯಘೋಷ : ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ | JANATA NEWS

28 Feb 2024

ಬೆಂಗಳೂರು : ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಜಯಘೋಷ ಕೂಗಿದ ಕಾಂಗ್ರೆಸ್ ಸಂಸದರ ಬೆಂಬಲಿಗರ ನಡವಳಿ ವಿರುದ್ಧ ಬಿಜೆಪಿ ಇಂದು ವಿಧಾನಸಭೆಯ ಕಲಾಪದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೆಳಮನೆ ಹಾಗೂ ಮೇಲ್ಮನೆ ಎರಡೂ ಕಡೆ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ.

ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ ಏಳು ಕೋಟಿ ಜನರ ಆತ್ಮ ವಿಧಾನಸೌಧದಲ್ಲಿದೆ. ಇಂತಹ ಸ್ಥಳದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅಂಥವರಿಗೆಲ್ಲ ಇಲ್ಲಿಗೆ ಬರಲು ಅವಕಾಶ ಮಾಡಿಕೊಟ್ಟವರು ಯಾರು? ಇದರಿಂದ ರಾಜ್ಯದ ಜನತೆ ಆತಂಕ್ಕೊಳಗಾಗುವಂತಾಗಿದೆ. ಅವರಿಗೆ ರೆಡ್ ಕಾರ್ಪೆಟ್ ಹಾಸಿ ಇಲ್ಲಿಗೆ ಕರೆಸಿಕೊಂಡಿದ್ದಲ್ಲದೆ, ಅವರನ್ನು ಕಳುಹಿಸಿಕೊಟ್ಟವರು ಯಾರು? ಅವರಿಗೆ ಬಿರಿಯಾನಿ ತಿನ್ನಿಸಿ ರಕ್ಷಿಸುತ್ತಿರುವವರು ಯಾರು?, ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಮಾತನಾಡಿದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಪಾರ್ಲಿಮೆಂಟ್‍ನಲ್ಲಿ ನುಗ್ಗಿದ್ದರಲ್ಲ ಎಂದರು. ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಬಳಿಕ ಮಾತು ಮುಂದುವರೆಸಿದ ಅಶೋಕ್ ಅವರು, ಸಂಸತ್‍ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು. ನೀವೇನಾದರೂ ಅವರಿಗೆ ಹೊಡೆದಿರಾ" ಎಂದು ತಿರುಗೇಟು ನೀಡಿದರು.

ಒಂದು ವೇಳೆ ಮಾಧ್ಯಮದ ವರದಿ ಸುಳ್ಳಾಗಿದ್ದರೆ ಅವರನ್ನು ಜೈಲಿಗೆ ಹಾಕಿ, ನನ್ನ ಮೇಲೂ ಕೇಸು ಹಾಕಿ. ಈ ಘಟನೆ ಬಗ್ಗೆ ಸಣ್ಣ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಬೇಕಿತ್ತು. ಶಾಸಕರ ಮೇಲೆ ಸ್ವಯಂಪ್ರೇರಿತ ಕೇಸು ಹಾಕುತ್ತಾರೆ, ಶಾಸಕರು ಘಟನಾ ಸ್ಥಳದಲ್ಲಿ ಇಲ್ಲವೆಂದರೂ ಕೇಸು ಹಾಕುತ್ತಾರೆ. ಪಿಎಫ್‍ಐ ಮೇಲಿನ ಕೇಸುಗಳನ್ನು ವಜಾ ಮಾಡಿದ್ದಾರೆ. ಹೀಗಾಗಿ ಕೋಲಾರ, ಶಿವಮೊಗ್ಗದಲ್ಲಿ ಮಚ್ಚು, ಲಾಂಗುಗಳ ಫ್ಲೆಕ್ಸ್ ಹಾಕಲಾಗಿದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಚರ್ಚೆ ಮಾಡಬೇಕಿತ್ತು. ಇಡೀ ದೇಶಕ್ಕೆ ಅವಮಾನವಾಗಿದೆ. ಕನ್ನಡಿಗರು ತಲೆ ತಗ್ಗಿಸುವಂತಾಗಿದೆ. ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ" ಎಂದು ಆರೋಪಿಸಿದರು.

English summary : Pro-Pakistan announcement: BJP lashed out at the government in the assembly

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...