Mon,Dec15,2025
ಕನ್ನಡ / English

ಬೆಂಗಳೂರಿನ ಪಶು ಆಸ್ಪತ್ರೆ 2 ಎಕರೆ ಜಮೀನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರ : ಕಾಂಗ್ರೆಸ್ ಓಲೈಕೆ ರಾಜಕಾರಣ ವಿರುದ್ಧ ಆಕ್ರೋಶ | JANATA NEWS

29 Feb 2024

ಬೆಂಗಳೂರು : ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಶು ಆಸ್ಪತ್ರೆ ಮತ್ತು ನಿವೇಶನದೊಂದಿಗೆ 2 ಎಕರೆ ಜಮೀನನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಆದೇಶಿಸಿದೆ.

ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸುನಿಲಕುಮಾರ್ ಕಾರ್ಕಳ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನ್ ಜಿಂದಾಬಾದ್ ಎಂದವರ ನಡುಮರಿಯುವ ತಾಕತ್ ಇಲ್ಲದ ಈ ಸರ್ಕಾರಕ್ಕೆ ಇಷ್ಟು ಬಹಿರಂಗವಾಗಿ ಮುಸ್ಲಿಂ ಓಲೈಕೆ ಮಾಡಲು ಲಜ್ಜೆ ಕಾಡುವುದಿಲ್ಲವೇ ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

"ಗೋಹತ್ಯೆ ನಿಷೇಧ ಕಾಯಿದೆಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದ ಪಶು ಸಂಗೋಪನಾ ಸಚಿವರು, ಪಶುಚಿಕಿತ್ಸಾಲಯದ ಜಾಗವನ್ನು ಮುಸಲ್ಮಾನರ ಶ್ರೇಯೋಭಿವೃದ್ಧಿಗೆ ದಾನ ಮಾಡಿದ್ದಾರೆ. ಜಾಗ ಕೇಳಿದ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಗೂ ದಾನ ಮಾಡಲು ಒಪ್ಪಿದ ಪಶು ಸಂಗೋಪನಾ ಖಾತೆ ಸಚಿವರಿಗೂ ಯಾವ ಪ್ರಶಸ್ತಿ ಕೊಡಬೇಕು ? ಪಾಕಿಸ್ತಾನ್ ಜಿಂದಾಬಾದ್ ಎಂದವರ ನಡುಮರಿಯುವ ತಾಕತ್ ಇಲ್ಲದ ಈ ಸರ್ಕಾರಕ್ಕೆ ಇಷ್ಟು ಬಹಿರಂಗವಾಗಿ ಮುಸ್ಲಿಂ ಓಲೈಕೆ ಮಾಡಲು ಲಜ್ಜೆ ಕಾಡುವುದಿಲ್ಲವೇ ?", ಎಂದು ಮಾಜಿ ಸಚಿವ ಸುನೀಲಕುಮಾರ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧೀನದಲ್ಲಿನ ಚಾಮರಾಜಪೇಟೆ ವಿಧಾನಸಭಾಕ್ಷೇತ್ರ ವ್ಯಾಪಿಯಲ್ಲಿ ಚಲವಾಧಿಪಾಳ್ಯ ವಾರ್ಡ್, ಮೈಸೂರು ರಸ್ತೆ ಹಾಗೂ ಗೂಡ್ ಶೆಡ್ ರಸ್ತೆಗೆ ಹೊಂದಿಕೊಂಡಂತೆ ಪಶುಸಂಗೋಪನಾ ಇಲಾಖೆಯ ಪಶು ಆಸ್ಪತ್ರೆ ಮತ್ತು ನಿವೇಶನವನ್ನು(2-0 ಎಕರೆ) ಮೌಲಾನಾ ಆಜಾದ್ /ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ನಿರ್ಮಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ಆದೇಶಿಸಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಆದೇಶಿಸಿದೆ.

English summary : Bengaluru Animal Hospital 2 acre land handed over to Minorities Department: Outrage against Congress crony politics

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...