Mon,Dec15,2025
ಕನ್ನಡ / English

ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರದಿಂದ ಜಿಲ್ಲೆಗಳ ನಡುವೆ ನೀರಿನ ಜಗಳ ಸೃಷ್ಟಿ | JANATA NEWS

14 Mar 2024

ಬೆಂಗಳೂರು : ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ ನಮ್ಮ ರಾಜ್ಯದಲ್ಲಿ ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ.. ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಕಿ ಹಾಕುತ್ತಿರುವುದು ನೀಚತನದ ಪರಮಾವಧಿ, ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಹೇಳಿರುವ ಕುಮಾರಸ್ವಾಮಿ ಅವರು, "ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ ನಮ್ಮ ರಾಜ್ಯದಲ್ಲಿ ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ. ಹಾಸನ ಮತ್ತು ತುಮಕೂರಿನಲ್ಲಿ ಅಂತದ್ದೇ 'ಜಲತಂಟೆ' ಪ್ರಯೋಗಿಸುತ್ತಿದೆ."

"ಹಾಸನ ಜಿಲ್ಲೆ ಜನರು ಎಂದೂ ತುಮಕೂರಿಗೆ ನೀರು ಕೊಡುವುದನ್ನು ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ. ನಮಗೂ ನೀರು ಕೊಡಿ ಎಂದಷ್ಟೇ ಕೇಳುತ್ತಿದ್ದಾರೆ. ಅಕ್ಕಪಕ್ಕದ ಜಿಲ್ಲೆಗಳ ಜನರು ಎಂದರೆ ಅವಳಿ-ಜವಳಿ ಮಕ್ಕಳಂತೆ. ಅಂಥ ಮಕ್ಕಳ ನಡುವೆಯೇ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಕಿ ಹಾಕುತ್ತಿರುವುದು ನೀಚತನದ ಪರಮಾವಧಿ."

"ನಾನು ನಿನ್ನೆ ಹಾಸನಕ್ಕೆ ಹೋಗಿದ್ದೆ. ಅಲ್ಲಿನ ಪರಿಸ್ಥಿತಿ ಏನಿದೆ ಎನ್ನುವುದನ್ನು ತಿಳಿದುಕೊಂಡೆ. ತುಮಕೂರಿನ ಪರಿಸ್ಥಿತಿಯೂ ಕಷ್ಟವಿದೆ ಎನ್ನವುದೂ ನನಗೆ ಗೊತ್ತು. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಹೇಮಾವತಿ ತಾಯಿ ರಾಜಕೀಯ ದಾಳವಾಗಿದ್ದಾಳೆ. ಪೊಲೀಸ್ ರಾಜ್ ಸೃಷ್ಟಿಸಿ ಜನರ ದನಿ ಹುಡುಗಿಸುವ ಯತ್ನ ನಡೆಸಿದೆ."

"ನಾಲೆ ಉದ್ದಕ್ಕೂ ಪೊಲೀಸ್ ಪಹರೆ ಹಾಕಿರುವುದು ಈ ಸರಕಾರ ನಮ್ಮ ಜನರ ಬಗ್ಗೆ ಹೊಂದಿರುವ ಕೀಳು ಮನಃಸ್ಥಿತಿಯನ್ನು ತೋರಿಸುತ್ತದೆ. ಪಹರೆ ಹಾಕಿ ನೀರು ಹರಿಸುವ ವರ್ತನೆ ಎರಡೂ ಜಿಲ್ಲೆಗಳ ಜನರಿಗೆ ಮಾಡುವ ಘೋರ ಅಪಮಾನ."

"ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡ ಅವರೂ ಕೆಲ ದಿನಗಳ ಹಿಂದೆಯೇ ಹಾಸನಕ್ಕೂ ನೀರು ಕೊಡಿ, ಬೇರೆಯವರಿಗೂ ನೀರು ಕೊಡಿ ಎಂದು ಹೇಳಿದ್ದರು. ಈ ಕಡು ಬರದಲ್ಲಿ ಹನಿನೀರಿಗೆ ಎಷ್ಟು ತತ್ವಾರವಿದೆ ಎನ್ನುವುದು ಸರಕಾರಕ್ಕೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದರು. ಇನ್ನೊಬ್ಬರ ಮಾತು ಕೇಳುವ ವ್ಯವಧಾನ ಸರಕಾರಕ್ಕೆ ಇಲ್ಲದಾಗಿದೆ.", ಎಂದು ವಾಗ್ದಾಳಿ ನಡೆಸಿದ್ದಾರೆ.

English summary :Cong Govt creating water fight between districts, to secretly drains Cauvery water Tamil Nadu

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...