Sat,Jun20,2026
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...