Thu,Feb12,2026
ಕನ್ನಡ / English

ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ | JANATA NEWS

18 May 2024

ಬೆಂಗಳೂರು : ಸಾಕಷ್ಟು ರಾಜಕೀಯ ಕೇಸರೆರೆಚಾಟಕ್ಕೆ ಕಾರಣವಾದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ತಲ್ಲಣ ಉಂಟುಮಾಡಿದೆ. ಪೆನ್‌ಡ್ರೈವ್‌ ಹಗರಣಕ್ಕೆ ಕಾರಣ ಡಿ.ಕೆ.ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ರು ಅಂತಾ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತಿನಿ ಅಂತಾ ಭರವಸೆ ನೀಡಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

ದೊಡ್ಡಮಟ್ಟದ ಹಣದ ಆಫರ್ ಕೊಟ್ಟರು. ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ರು, ಎಂದು ಹೇಳಿದ್ದಾರೆ.

ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳಿಸಿದ್ದರು ಎಂದು ತಿಳಿಸಿದ್ದಾರೆ.

ಚನ್ನರಾಯಪಟ್ಟಣ ಗೋಪಾಲಸ್ವಾಮಿ ಅವರನ್ನು ಸಂಧಾನಕ್ಕೆ ಕಳುಹಿಸಿದ್ದರು. ಐದು ಕೋಟಿ ಕ್ಯಾಶ್ ಕೊಟ್ಟು ಡಿಕೆಶಿ ಕಳಿಸಿದ್ದರು. ದೇಶದಲ್ಲಿ ಮೋದಿಯವರಿಗೆ ಕಳಂಕ ತರಬೇಕು. ಈ ರಾಸಲೀಲೆ ಹಗರಣದಲ್ಲಿ ಮೋದಿಯವರನ್ನು ಬಿಂಬಿಸಿ ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಅಂತಾ ಮಾಡಿದರು. ಡಿ.ಕೆ.ಶಿವಕುಮಾರ್ ಮುಖ್ಯ ಉದ್ದೇಶ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವವನ್ನು ರಾಜ್ಯದಲ್ಲಿ ಹಾಳು ಮಾಡಬೇಕು ಎನ್ನುವುದು. ಇದು ಸತ್ಯ", ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

English summary :MP Prajwal Revanna Pen Drive Case: All DK Shivakumar Plan - Advocate Devarajegowda

ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ರಾಹುಲ್ ಗಾಂಧಿ ಆರೋಪದ ರಾಜಕೀಯ ವಿವಾದದ ನಂತರ ಆತ್ಮಚರಿತ್ರೆಯ ಸ್ಥಿತಿಯ ಬಗ್ಗೆ ನರವಾಣೆ ಸ್ಪಷ್ಟನೆ
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಲೋಕಸಭೆಯಲ್ಲಿ ಪ್ರಧಾನಿ ವಿರುದ್ಧ ಸಂಚುರೂಪ ಆರೋಪದ ಮೇಲೆ ಎಫ್‌ಐಆರ್ ದಾಖಲು; ಆರೋಪ ತಿರಸ್ಕರಿಸಿದ ಪ್ರತಿಪಕ್ಷಗಳು
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ:  ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
ಬೆಂಗಳೂರು ಮೆಟ್ರೋ ಪ್ರಯಾಣ ದರ ವಿವಾದ: ಬದಲಾದ ಸಬ್ಸಿಡಿ ನೀತಿ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವೆ ಘರ್ಷಣೆ
 ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಡ್ರೋನ್ ಕಂಪನಿಯ ವಿರುದ್ಧದ ಎಫ್‌ಐಆರ್‌ಗೆ ತಡೆ, ಪೊಲೀಸರ ಕಿರುಕುಳ ಖಂಡಿಸಿದ ಹೈಕೋರ್ಟ್
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ - ಮೆಟ್ರೊ ದರ ಹೆಚ್ಚಳದ ವಿರುದ್ಧ ಬಿಜೆಪಿ ಸಂಸದ ಸೂರ್ಯ ತೀವ್ರ ವಾಗ್ದಾಳಿ
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ತಲುಪಿವೆ - ಪಿಯೂಷ್ ಗೋಯಲ್
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಇಸ್ಲಾಮಾಬಾದ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಹೊಣೆ ಹೊತ್ತ ಐಸಿಸ್ ; ಚರ್ಚೆಗೆ ಇಂಧನ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಜನ-ಔಷಧಿ ಮಾದರಿಯ : ಪ್ರಿಸ್ಕ್ರಿಪ್ಷನ್ ಔಷಧಿಗಳ ವೆಚ್ಚವನ್ನು ಕಡಿತಗೊಳಿಸಲು ಅಮೆರಿಕದಿಂದ ಟ್ರಂಪ್‌ಆರ್‌ಎಕ್ಸ್.ಗವ್ ಅನಾವರಣ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ಭದ್ರತಾ ಭೀತಿ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗದಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದೆ - ಸ್ಪೀಕರ್ ಓಂ ಬಿರ್ಲಾ
ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ
ವಿಜಯ್ ಮಲ್ಯಯಿಂದ ₹14,131 ಕೋಟಿ ವಸೂಲಿ ಮಾಡಿರುವ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ನ್ಯೂಸ್ MORE NEWS...