Sat,Apr11,2026
ಕನ್ನಡ / English

ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ | JANATA NEWS

18 May 2024

ಬೆಂಗಳೂರು : ಸಾಕಷ್ಟು ರಾಜಕೀಯ ಕೇಸರೆರೆಚಾಟಕ್ಕೆ ಕಾರಣವಾದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ತಲ್ಲಣ ಉಂಟುಮಾಡಿದೆ. ಪೆನ್‌ಡ್ರೈವ್‌ ಹಗರಣಕ್ಕೆ ಕಾರಣ ಡಿ.ಕೆ.ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ರು ಅಂತಾ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತಿನಿ ಅಂತಾ ಭರವಸೆ ನೀಡಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

ದೊಡ್ಡಮಟ್ಟದ ಹಣದ ಆಫರ್ ಕೊಟ್ಟರು. ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ರು, ಎಂದು ಹೇಳಿದ್ದಾರೆ.

ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳಿಸಿದ್ದರು ಎಂದು ತಿಳಿಸಿದ್ದಾರೆ.

ಚನ್ನರಾಯಪಟ್ಟಣ ಗೋಪಾಲಸ್ವಾಮಿ ಅವರನ್ನು ಸಂಧಾನಕ್ಕೆ ಕಳುಹಿಸಿದ್ದರು. ಐದು ಕೋಟಿ ಕ್ಯಾಶ್ ಕೊಟ್ಟು ಡಿಕೆಶಿ ಕಳಿಸಿದ್ದರು. ದೇಶದಲ್ಲಿ ಮೋದಿಯವರಿಗೆ ಕಳಂಕ ತರಬೇಕು. ಈ ರಾಸಲೀಲೆ ಹಗರಣದಲ್ಲಿ ಮೋದಿಯವರನ್ನು ಬಿಂಬಿಸಿ ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಅಂತಾ ಮಾಡಿದರು. ಡಿ.ಕೆ.ಶಿವಕುಮಾರ್ ಮುಖ್ಯ ಉದ್ದೇಶ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವವನ್ನು ರಾಜ್ಯದಲ್ಲಿ ಹಾಳು ಮಾಡಬೇಕು ಎನ್ನುವುದು. ಇದು ಸತ್ಯ", ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

English summary :MP Prajwal Revanna Pen Drive Case: All DK Shivakumar Plan - Advocate Devarajegowda

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...