Fri,Jan24,2025
ಕನ್ನಡ / English

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ | JANATA NEWS

21 May 2024
1095

ಪುಣೆ : ಇಬ್ಬರು ಸಾಫ್ಟವೇರ್ ಉದ್ಯೋಗಿಗಳ ಸಾವಿಗೆ ಕಾರಣವಾದ ವೇಗವಾಗಿ ಬಂದ ಬಿಲ್ಡರ್‌ ಒರ್ವರ ಪುತ್ರನ ಐಷಾರಾಮಿ ಪೋರ್ಶೆ ಕಾರು ಹಾಗೂ ಆತನಿಗೆ ನ್ಯಾಯವ್ಯವಸ್ಥೆ ನೀಡಿದ ಶಿಕ್ಷೆಯ ಕುರಿತು ಸಾಕಷ್ಟು ಟೀಕೆಗೆ ಕಾರಣವಾಗಿದೆ.

ಕುಡಿದು ವೇಗವಾಗಿ ಚಲಾಯಿಸಿದ್ದ ಪೋರ್ಶೆ ಕಾರೊಂದು ನಿಯಂತ್ರಣ ತಪ್ಪಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಎಂದು ಹೇಳಲಾಗಿದೆ. ಇದರಿಂದ ಸಿಟ್ಟಿಗೆದ್ದ ಜನ, ಕಾರು ಚಾಲನೆ ಮಾಡುತ್ತಿದ್ದ ವೇದಾಂತ್ ಅಗರ್ವಾಲ್‌ ಎಂಬಾತನನ್ನು ಕಾರಿನಿಂದ ಹೊರಗೆ ಎಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಆದರೆ, ಈ ಭಯಾನಕ ಅಪಘಾತ ನಡೆದ 15 ಘಂಟೆಯ ಒಳಗೆ ವೇದಾಂತಗೆ ಜಾಮೀನು ಮಂಜೂರು ಮಾಡಲಾಗಿದೆ. 17 ವರ್ಷದ ಈ ಯುವಕ ಕುಡಿದು ವಾಹನ ಚಲಾಯಿಸಿ ಇಬ್ಬರನ್ನು ಕೊಂದ ಆರೋಪದ ಬೆನ್ನಲ್ಲೇ, 300 ಪದಗಳ ಪ್ರಬಂಧವನ್ನು ಬರೆಯುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ದುರಂತವು ಆಕ್ರೋಶವನ್ನು ಹುಟ್ಟುಹಾಕಿದೆ, ಅನೇಕರು ನ್ಯಾಯಾಂಗ ತೀವ್ರವಾಗಿ ಟೀಕಿಸಿದ್ದು ಮತ್ತು ಅಸ್ತಿತ್ವದಲ್ಲಿರುವ ಸಂಚಾರ ಕಾನೂನುಗಳನ್ನು ದೂಷಿಸಿದ್ದಾರೆ.

ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ಬಾಸ್ಕರ್ ರಾವ್ ಅವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, "ಇದು ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಂತರಾಷ್ಟ್ರೀಯ ಅಪಹಾಸ್ಯದ ವಿಷಯವಾಗಿದೆ, ಅದರಲ್ಲೂ ವಿಶೇಷವಾಗಿ ಈಗ ರಜೆಯಲ್ಲಿರುವ ನ್ಯಾಯಾಂಗ.. ಶ್ರೀಮಂತ ಮತ್ತು ದುರಹಂಕಾರಿ ಪೋಷಕರ ಹಾಳಾದ ಕೆಟ್ಟ ಹುಡುಗನ ಕೈಯಲ್ಲಿ ಸತ್ತ ಇಬ್ಬರು ಯುವಕರ ಪೋಷಕರಿಗೆ ನಾವು ಯಾವ ಸಾಂತ್ವನದ ಮಾತುಗಳನ್ನು ನೀಡಬಹುದು…😡 😡😡", ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.

ಪೋರ್ಶೆ ಕಾರು ಚಲಾಯಿಸುತ್ತಿದ್ದ ಅಗರ್ವಾಲ್ ಕಲ್ಯಾಣಿ ನಗರದ ಪಬ್‌ವೊಂದರಿಂದ ಆಗಮಿಸುತ್ತಿದ್ದ ಎಂದು ತಿಳಿದು ಬಂದಿದೆ. ಆದರೆ ಆತ ಪಾನಮತ್ತನಾಗಿದ್ದನೋ ಇಲ್ಲವೋ ಎಂಬ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ.

ಘಟನೆಯ ಎರಡು ದಿನಗಳ ನಂತರ, ಬಾಲಾಪರಾಧಿಯ ತಂದೆಯನ್ನು ಮೋಟಾರು ವಾಹನ ಕಾಯ್ದೆ, 2019 ರ ಪ್ರಕಾರ ಬಂಧಿಸಲಾಯಿತು.

ವೇದಾಂತ್ ಅಗರ್ವಾಲ್ ಪುಣೆಯಲ್ಲಿ ಪುಣೆಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಬ್ರಹ್ಮ ರಿಯಾಲ್ಟಿಯ ಮಾಲೀಕ ವಿಶಾಲ್ ಅಗರ್ವಾಲ್ ಎಂಬುವವರ ಪುತ್ರನಾಗಿದ್ದಾನೆ. ಐಷಾರಾಮಿ ಪೋರ್ಶೆ ಕಾರಿನಲ್ಲಿ ಮಿತಿ ಮೀರಿದ ವೇಗವಾಗಿ ಆಗಮಿಸಿದ ಈತ ನಿಯಂತ್ರಣ ತಪ್ಪಿ ಬೈಕ್ ಹಾಗೂ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್‌ನಲ್ಲಿದ್ದ ಅನಿಸ್ ದುಧಿಯ ಹಾಗೂ ಅಶ್ವಿನಿ ಕೋಸ್ಟಾ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯರವಾಡ ಪೊಲೀಸ್‌ ಠಾಣೆಯಲ್ಲಿ ಮೃತರ ಸ್ನೇಹಿತರಾದ ಇಕೀಬ್ ರಂಜಾನ್ ಮುಲ್ಲಾ ಎಂಬುವವರು ಪ್ರಕರಣ ದಾಖಲಿಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಜನ ಮಾತ್ರ ಆತನನ್ನು ಕಾರಿನಿಂದ ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

English summary :Pune Porsche car accident: Youth granted bail with essay writing punishment, father arrested

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ

ನ್ಯೂಸ್ MORE NEWS...