Sat,Apr11,2026
ಕನ್ನಡ / English

ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗು, ಪ್ರಜ್ವಲ್‌ಗೆ ದೇವೇಗೌಡರ ಎಚ್ಚರಿಕೆ | JANATA NEWS

23 May 2024

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವೈರಲ್ ಆದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು,"ಭಾರತಕ್ಕೆ ವಾಪಸಾಗು, ಪೊಲೀಸರಿಗೆ ಶರಣಾಗು, ಇಲ್ಲದೇ ಹೋದಲ್ಲಿ ನನ್ನ ಕೋಪಕ್ಕೆ ತುತ್ತಾಗುವೆ," ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ದೇವೇಗೌಡರ ಪತ್ರದ ವಿವರ: 'ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು' ಎಂದು ಪತ್ರವನ್ನು ಆರಂಭಿಸಿದ್ದಾರೆ.

ತಪ್ಪು ಸಾಬೀತಾದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕಠಿನ ಶಿಕ್ಷೆ ವಿಧಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ಹಗರಣ ಬಯಲಾದ ದಿನದಿಂದಲೂ ನನ್ನ ಮಗ ಎಚ್.ಡಿ.ಕುಮಾರಸ್ವಾಮಿ ಕೂಡ ಇದನ್ನೇ ಹೇಳಿದ್ದಾರೆ' ಎಂದು ಬರೆದಿದ್ದಾರೆ.

ಜನರು ನನ್ನ ಬಗ್ಗೆ, ನಮ್ಮ ಕುಟುಂಬದ ವಿರುದ್ಧ ಕಠೋರ ಪದಗಳನ್ನು ನಾನಾ ವಿರುದ್ಧ ಬಳಸುತ್ತಿದ್ದಾರೆ ಎನ್ನುವುದು ನನಗೆ ಅರಿವಿದೆ. ನಾನು ಅವರನ್ನು ತಡೆಯುವುದಿಲ್ಲ, ಅವರನ್ನು ಟೀಕಿಸುವುದಿಲ್ಲ ಅವರೊಂದಿಗೆ ವಾದ ಮಾಡುವುದಿಲ್ಲ. ಅವರೆಲ್ಲರೂ ಸತ್ಯ ಹೊರ ಬರುವ ವರೆಗೆ ಕಾಯಬೇಕು ಎಂದು ಬರೆದಿದ್ದಾರೆ.

ಪ್ರಜ್ವಲ್‌ ಚಟುವಟಿಕೆಗಳ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ, ಅವನನ್ನು ರಕ್ಷಿಸಲು ನನಗೆ ಯಾವುದೇ ಇಚ್ಛೆಯಿಲ್ಲ ಎಂದು ಅವರಿಗೆ ಮನವರಿಕೆ ಮಾಡಿಕೊಡಲು ನನಗೆ ಸಾಧ್ಯವಿಲ್ಲ. ಆತನ ಚಲನವಲನಗಳು, ಆತನ ವಿದೇಶ ಪ್ರವಾಸದ ಬಗ್ಗೆ ನನಗೆ ಅರಿವಿರಲಿಲ್ಲ ಎಂದೂ ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಿಲ್ಲ. ನನ್ನ ಆತ್ಮಸಾಕ್ಷಿಗೆ ಉತ್ತರ ನೀಡುವುದನ್ನು ನಾನು ನಂಬಿದ್ದೇನೆ. ನಾನು ದೇವರನ್ನು ನಂಬುತ್ತೇನೆ ಮತ್ತು ದೇವರಿಗೆ ಸತ್ಯ ತಿಳಿದಿದೆ ಎಂದು ನನಗೆ ಗೊತ್ತು

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು" ಎಂದು ದೇವೇಗೌಡರು ಪತ್ರದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Deve Gowda warns Prajwal to return to India and surrender to the police

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...