Tue,May26,2026
ಕನ್ನಡ / English

ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗು, ಪ್ರಜ್ವಲ್‌ಗೆ ದೇವೇಗೌಡರ ಎಚ್ಚರಿಕೆ | JANATA NEWS

23 May 2024

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವೈರಲ್ ಆದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು,"ಭಾರತಕ್ಕೆ ವಾಪಸಾಗು, ಪೊಲೀಸರಿಗೆ ಶರಣಾಗು, ಇಲ್ಲದೇ ಹೋದಲ್ಲಿ ನನ್ನ ಕೋಪಕ್ಕೆ ತುತ್ತಾಗುವೆ," ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ದೇವೇಗೌಡರ ಪತ್ರದ ವಿವರ: 'ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು' ಎಂದು ಪತ್ರವನ್ನು ಆರಂಭಿಸಿದ್ದಾರೆ.

ತಪ್ಪು ಸಾಬೀತಾದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕಠಿನ ಶಿಕ್ಷೆ ವಿಧಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ಹಗರಣ ಬಯಲಾದ ದಿನದಿಂದಲೂ ನನ್ನ ಮಗ ಎಚ್.ಡಿ.ಕುಮಾರಸ್ವಾಮಿ ಕೂಡ ಇದನ್ನೇ ಹೇಳಿದ್ದಾರೆ' ಎಂದು ಬರೆದಿದ್ದಾರೆ.

ಜನರು ನನ್ನ ಬಗ್ಗೆ, ನಮ್ಮ ಕುಟುಂಬದ ವಿರುದ್ಧ ಕಠೋರ ಪದಗಳನ್ನು ನಾನಾ ವಿರುದ್ಧ ಬಳಸುತ್ತಿದ್ದಾರೆ ಎನ್ನುವುದು ನನಗೆ ಅರಿವಿದೆ. ನಾನು ಅವರನ್ನು ತಡೆಯುವುದಿಲ್ಲ, ಅವರನ್ನು ಟೀಕಿಸುವುದಿಲ್ಲ ಅವರೊಂದಿಗೆ ವಾದ ಮಾಡುವುದಿಲ್ಲ. ಅವರೆಲ್ಲರೂ ಸತ್ಯ ಹೊರ ಬರುವ ವರೆಗೆ ಕಾಯಬೇಕು ಎಂದು ಬರೆದಿದ್ದಾರೆ.

ಪ್ರಜ್ವಲ್‌ ಚಟುವಟಿಕೆಗಳ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ, ಅವನನ್ನು ರಕ್ಷಿಸಲು ನನಗೆ ಯಾವುದೇ ಇಚ್ಛೆಯಿಲ್ಲ ಎಂದು ಅವರಿಗೆ ಮನವರಿಕೆ ಮಾಡಿಕೊಡಲು ನನಗೆ ಸಾಧ್ಯವಿಲ್ಲ. ಆತನ ಚಲನವಲನಗಳು, ಆತನ ವಿದೇಶ ಪ್ರವಾಸದ ಬಗ್ಗೆ ನನಗೆ ಅರಿವಿರಲಿಲ್ಲ ಎಂದೂ ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಿಲ್ಲ. ನನ್ನ ಆತ್ಮಸಾಕ್ಷಿಗೆ ಉತ್ತರ ನೀಡುವುದನ್ನು ನಾನು ನಂಬಿದ್ದೇನೆ. ನಾನು ದೇವರನ್ನು ನಂಬುತ್ತೇನೆ ಮತ್ತು ದೇವರಿಗೆ ಸತ್ಯ ತಿಳಿದಿದೆ ಎಂದು ನನಗೆ ಗೊತ್ತು

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು" ಎಂದು ದೇವೇಗೌಡರು ಪತ್ರದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Deve Gowda warns Prajwal to return to India and surrender to the police

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...