Mon,Dec15,2025
ಕನ್ನಡ / English

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಣ ಬೇರೆಬೇರೆ ಕಂಪನಿಗಳ ಖಾತೆಗೆ.. ದೊಡ್ಡ ಶೆಡ್ಯಂತ್ರ - ಕೋಟಾ ಶ್ರೀನಿವಾಸ ಪೂಜಾರಿ | JANATA NEWS

03 Jun 2024

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ಕೇಳಿದ್ದಾರೆಂದು ಸುದ್ದಿ, ಅದಕ್ಕೆ ನಾಗೇಂದ್ರ ಅವರು ನನ್ನ ರಾಜೀನಾಮೆ ಕೇಳಿದರೆ, ಎಲ್ಲರ ವಿಷಯ ಬಹಿರಂಗ ಪಡಿಸುತ್ತೇನೆ ಎಂದು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿ ಬಂದಿದೆ. ಎಂದು ಮಾಜಿ ಸಚಿವ ಹಾಗೂ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ

ಈ ಕುರಿತು ಮಾತನಾಡಿರುವ ಅವರು, "ಸಿದ್ದರಾಮಯ್ಯನವರು ನಾಗೇಂದ್ರ ಅವರನ್ನು ಕರೆದು ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ ಎಂದು ಸುದ್ದಿ. ಆದರೆ ಸಚಿವ ನಾಗೇಂದ್ರ ಅವರು ನನ್ನ ರಾಜೀನಾಮೆ ಕೇಳಿದರೆ ಎಲ್ಲರದ್ದು ಬಹಿರಂಗಪಡಿಸುತ್ತೇನೆ, ಎಂದು ಬೆದರಿಕೆ ಬೆದರಿಕೆ ಹಾಕಿದ್ದಾರೆ ಎಂದು ಸುದ್ದಿ. ಹಾಗಾಗಿ ಮುಖ್ಯಮಂತ್ರಿಗಳು ಕೂಡ ಸಂದಿಗ್ನದಲ್ಲಿ ಇದ್ದಾರೆ ಎಂದು ನಮಗೆ ಅನಿಸುತ್ತದೆ. ಆ ಕಾರಣಕ್ಕೆ ಭಾರತೀಯ ಜನತಾ ಪಕ್ಷ ಇದನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ."
"ಬಡವರ ಹಣ, ದುರ್ಬಲರ ಹಣ, ಧ್ವನಿ ಇಲ್ಲದವರ ಹಣ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಪರ ಕೆಲಸ ಮಾಡುತ್ತೇನೆ, ಎಂದು ಹೇಳುತ್ತಿರುವ ಸಿದ್ದರಾಮಯ್ಯ ಅವರ(ಸರ್ಕಾರದ) 87 ಕೋಟಿ ರೂಪಾಯಿ ಬಡವರ ಶಿಕ್ಷಣ, ಅವರು ಉದ್ಯೋಗಕ್ಕೆ, ಅವರ ಆರೋಗ್ಯಕ್ಕೆ, ವಸತಿಗೆ ಮೀಸಲಿಟ್ಟಂತಹ ಹಣ ಇವತ್ತು ಕಂಪನಿಗಳಿಗೆ, ಬೇರೆಬೇರೆ ಕಂಪನಿಗಳ ಖಾತೆಗೆ ಹೋಗುತ್ತಿದೆ. ಅಂತ ಪರಂಪರೆ ಮತ್ತು ವ್ಯವಸ್ಥೆ ರಾಜ್ಯದಲ್ಲಿ ತುಂಬಾ ಆತಂಕಕ್ಕೆ ಎಡೆಮಾಡಿದೆ. "
"ಆ ಹಿನ್ನಲೆಯಲ್ಲಿ ಸಚಿವರ ರಾಜೀನಾಮೆ ಕೇಳಲಾಗದಷ್ಟು, ಪಡೆಯಲಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿದ್ದಾರೆ ಎನ್ನುವಂತ ಆತಂಕ ಈಗ ರಾಜ್ಯದಲ್ಲಿ ಎಲ್ಲೆಡೆ ಹರದಾಡುತ್ತಿದೆ. ಆ ಹಿನ್ನೆಲೆಯಲ್ಲಿ ನಾನು ಸಿದ್ದರಾಮಯ್ಯನವರಲ್ಲಿ ಅಗ್ರಹಪಡಿಸುತ್ತೇನೆಂದರೆ, ತಕ್ಷಣ ನಿಮ್ಮ ಸಚಿವರ ರಾಜೀನಾಮೆ ತೆಗೆದುಕೊಳ್ಳಲು ಏನಾದರೂ ನಿಮಗೆ ತೊಂದರೆ ಇದ್ದರೆ, ನಿಮ್ಮ ರಾಜೀನಾಮೆ ಕೇಳುವಂತಹ ಅನಿವಾರ್ಯತೆ ಈಗ ಭಾರತೀಯ ಜನತಾ ಪಕ್ಷಕ್ಕೆ ಬಂದಿದೆ ಎನ್ನುವಂತ ಮಾತು ಹೇಳಬೇಕಾಗಿದೆ."
"ಒಟ್ಟಾರೆ ಈ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಣ ಇಷ್ಟೊಂದು ದುರ್ವ್ಯವಹಾರ ಆಗುವಾಗ ಕೂಡ ಕಣ್ಣು ಮುಚ್ಚಿ ಕುಳಿತಿರುವುದು ನೋಡಿದರೆ ಯಾರು ಊಹಿಸಲು ಆಗದಂತಹ ದೊಡ್ಡ ಶೆಡ್ಯಂತ್ರ ಇದೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ," ಎಂದು ಮಾಜಿ ಸಚಿವ ಪೂಜಾರಿ ಹೇಳಿದ್ದಾರೆ.

ಈ ವಿಡಿಯೋ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, "ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಕಂಡ ಅತ್ಯಂತ ದುರ್ಬಲ ಸಿಎಂ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಲಾಭದಲ್ಲಿ ಪಾಲುದಾರರಾದವರು ನಷ್ಟದಲ್ಲಿಯೂ ಸಹ ಪಾಲುದಾರರಾಗಬೇಕು ಎಂಬುದು ಸಚಿವ ನಾಗೇಂದ್ರ ಅವರ ಅಹವಾಲು ಇರಬಹುದು. ಸಚಿವ ನಾಗೇಂದ್ರ ಅವರ ಜೊತೆ ಸಿಎಂ ಸಿದ್ದರಾಮಯ್ಯನವರು ಸಹ ರಾಜೀನಾಮೆ ನೀಡಿದರೂ ಅಚ್ಚರಿಯಿಲ್ಲ!!!", ಎಂದು ಎಕ್ಸ್ ನಲ್ಲಿ ಹೇಳಿದೆ.

English summary :SC, ST money going to the accounts of different companies.. Big conspiracy - Kota Srinivasa Pujari

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...