Mon,Dec15,2025
ಕನ್ನಡ / English

ಎಲೋನ್ ಮಸ್ಕ್ ಹೇಳಿಕೆ ಬೆನ್ನಲ್ಲೇ, ಭಾರತದಲ್ಲಿ ಇವಿಎಂಗಳು ಬ್ಲ್ಯಾಕ್ ಬಾಕ್ಸ್ ಎಂದ ರಾಹುಲ್ ಗಾಂಧಿ : | JANATA NEWS

17 Jun 2024

ನವದೆಹಲಿ : ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಇವಿಎಂಗಳನ್ನು 'ನಿರ್ಮೂಲನೆ ಮಾಡುವ' ಹೇಳಿಕೆಯ ನಂತರ ಮತ್ತೊಮ್ಮೆ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಕುರಿತು ಇತ್ತೀಚಿನ ಚರ್ಚೆಯಲ್ಲಿ, ಈಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಧ್ವನಿಗೆ ದನಿಗೂಡಿಸಿದ್ದಾರೆ. ಚರ್ಚೆಯನ್ನು ಹುಟ್ಟುಹಾಕಿದ ಸುದ್ದಿ ವರದಿಯನ್ನು ಉಲ್ಲೇಖಿಸಿ, ರಾಹುಲ್ ಗಾಂಧಿ ಭಾರತದಲ್ಲಿ ಇವಿಎಂಗಳನ್ನು 'ಕಪ್ಪು ಪೆಟ್ಟಿಗೆ' ಎಂದು ಲೇಬಲ್ ಮಾಡಿದ್ದಾರೆ. ಇವಿಎಂ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಾರ್ವತ್ರಿಕ ಚುನಾವಣಾ ಫಲಿತಾಂಶವನ್ನು ಸಂಭ್ರಮಿಸಿದ ಕಾಂಗ್ರೆಸ್ ಈಗ ಮತ್ತೊಮ್ಮೆ ಇವಿಎಂ ಮೇಲೆ ಆರೋಪ ಮಾಡಲಾರಂಭಿಸಿದೆ.

ಇದಕ್ಕೂ ಮೊದಲು, ಟೆಕ್ ಬಿಲಿಯನೇರ್ ಮಸ್ಕ್ ಅವರು ಇವಿಎಂಗಳ ಸಮಗ್ರತೆಯನ್ನು ಪ್ರಶ್ನಿಸಿದ್ದಾರೆ ಮತ್ತು ಮತದಾನ ಯಂತ್ರವನ್ನು 'ನಿರ್ಮೂಲನೆ' ಮಾಡುವ ಅಗತ್ಯವನ್ನು ಒತ್ತಾಯಿಸಿರುವುದು ಚರ್ಚೆಗೆ ಕಾರಣವಾಯಿತು.

'ಎಕ್ಸ್' ನ ಪೋಸ್ಟ್‌ನಲ್ಲಿ, "ನಾವು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ತೊಡೆದುಹಾಕಬೇಕು. ಮಾನವರು ಅಥವಾ ಎಐ ನಿಂದ ಹ್ಯಾಕ್ ಆಗುವ ಅಪಾಯವು ಚಿಕ್ಕದಾಗಿದ್ದರೂ, ಇನ್ನೂ ತುಂಬಾ ಹೆಚ್ಚಾಗಿದೆ.", ಎಂದು ಮಸ್ಕ್ ಹೇಳಿದರು. ಆದಾಗ್ಯೂ ಮಸ್ಕ್ ಮುಂಬರುವ ಯುಎಸ್ ಚುನಾವಣೆ ಅಥವಾ ಇತ್ತೀಚಿನ ಭಾರತದಲ್ಲಿ ನಡೆದ ಚುನಾವಣೆಯನ್ನು ಗುರಿಯಾಗಿಸಿಕೊಂಡಿದ್ದಾರೋ ಎಂಬುದು ಅಸ್ಪಷ್ಟವಾಗಿದೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡುತ್ತಾ, ಭಾರತದಲ್ಲಿ ಇವಿಎಂಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಸಂಕ್ಷಿಪ್ತವಾಗಿ ವಿವರಿಸಲು ಕಾರಣವಾಗಿದೆ. ಚಂದ್ರಶೇಖರ್ ಅವರು ಮಸ್ಕ್ ಅವರನ್ನು ಭಾರತಕ್ಕೆ ಭೇಟಿ ನೀಡಲು ಮತ್ತು ಅದರ ಚುನಾವಣಾ ಪ್ರಕ್ರಿಯೆಗಳಿಂದ ಕೆಲವು ಒಳನೋಟಗಳನ್ನು ಪಡೆಯಲು ಆಹ್ವಾನಿಸಲು ಅವರು ಮುಂದಾದರು. ಎಲೋನ್ ಮಸ್ಕ್ ಪಾಠ ನಡೆಸಲು ನಾವು ಸಂತೋಷಪಡುತ್ತೇವೆ, ಎಂದು ಅವರು ಹೇಳಿದರು.

ಆದರೆ, ಸಂಸ್ಥೆಗಳ ಹೊಣೆಗಾರಿಕೆಯ ಕೊರತೆಯು ಪ್ರಜಾಪ್ರಭುತ್ವವನ್ನು ವಂಚನೆಗೆ ಗುರಿಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ರಾಂಧಿ ಆರೋಪಿಸಿದ್ದಾರೆ. ದೇಶದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ರಾಹುಲ್ ಗಾಂಧಿ, "ಭಾರತದಲ್ಲಿ ಇವಿಎಂಗಳು "ಬ್ಲ್ಯಾಕ್ ಬಾಕ್ಸ್", ಮತ್ತು ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಾಳಜಿಯನ್ನು ಎತ್ತಲಾಗುತ್ತಿದೆ. ಸಂಸ್ಥೆಗಳಿಗೆ ಹೊಣೆಗಾರಿಕೆ ಇಲ್ಲದಿರುವಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ.", ಎಂದು ರಾಹುಲ್ ಗಾಂಧಿ ಮತ್ತೊಮ್ಮೆ ಇವಿಎಂ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ.

English summary :After Elon Musk statement, Rahul Gandhi called EVMs in India are a black box

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...