Wed,Feb25,2026
ಕನ್ನಡ / English

ಈಶ್ವರ ಖಂಡ್ರೆ ಮಗ ಕೇವಲ ನಮ್ಮ ಮುಸಲ್ಮಾನರ ವೋಟಿನ ಕಾರಣದಿಂದ ಗೆದ್ದಿದ್ದಾರೆ - ಸಚಿವ ಜಮೀರ್ ಅಹ್ಮದ್ | JANATA NEWS

25 Jun 2024

ಬೀದರ್ : ನಾನು ಈಶ್ವರ್ ಕಂಡ್ರೆ ಹತ್ರ ಮಾತನಾಡುತ್ತೇನೆ. ಅಷ್ಟುಕ್ಕೂ ಈಶ್ವರ ಖಂಡ್ರೆ ಮಗ ಕೇವಲ ಮತ್ತು ಕೇವಲ ನಮ್ಮ ಮುಸಲ್ಮಾನರ ವೋಟಿನ ಕಾರಣದಿಂದ ಗೆದ್ದಿದ್ದಾರೆ. ನಮ್ಮ ಕೆಲಸ ಮಾಡೋಕೋಸ್ಕರ. ನಾನು ಮಾಡಿಸಿ ಕೊಡುತ್ತೇನೆ, ಎಂದು ಸ್ಪಷ್ಟವಾಗಿ ಮೈಕ್ ಹಿಡಿದು ಹೇಳಿರುವ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ಸಾಕಷ್ಟು ಸುದ್ಧಿ ಮಾಡುತ್ತಿದ್ದು, ಸಾಕಷ್ಟು ಟೀಕೆಗೆ ಆಹ್ವಾನ ನೀಡಿದೆ.

ಬೀದರ್‌ನಲ್ಲಿ ನಡೆದ ವಕ್ಫ್ ಅದಾಲತ್‌ನಲ್ಲಿ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೇವಲ ಮುಸ್ಲಿಂಮರ ವೋಟ್ ನಿಂದ ಲೋಕಸಭಾ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಮುಸ್ಲಿಂ ಮತಗಳಿಂದಲೇ ಗೆದ್ದಿದ್ದು ಎಂದು ತಮ್ಮದೇ ಪಕ್ಷದ ಸಚಿವನ ವಿರುದ್ಧ ಹೇಳಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

ವಿರೋಧಪಕ್ಷ ಬಿಜೆಪಿ ಐಟಿ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಮಾಳವೀಯ ಸಚಿವ ಖಾನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಸಚಿವ ಜಮೀರ್ ಖಾನ್ ಅವರು ಮಾತನಾಡಿರುವ ವಿಡಿಯೋ ಶೇರ್ ಮಾಡಿದ್ದು, 'ಮುಸ್ಲಿಂ ವೀಟೋ ಕರ್ನಾಟಕವನ್ನು ಹಾಳು ಮಾಡುತ್ತಿದೆ... ಈ ವಿಡಿಯೋದಲ್ಲಿ ಕರ್ನಾಟಕದ ವಕ್ಫ್ ಸಚಿವ ಝಮೀರ್ ಅಹಮದ್ ಖಾನ್ ಅವರು ಕಾಡಿನೊಳಗೆ ನಿರ್ಮಿಸಲಾದ ಸ್ಮಶಾನ ಭೂಮಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ, “ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ, ಹೊಸದಾಗಿ ಸಂಸದರಾಗಿರುವ ಸಾಗರ್ ಖಂಡ್ರೆ ಅವರು ಕೇವಲ ಮುಸ್ಲಿಂ ಮತಗಳಿಂದ ಗೆದ್ದಿದ್ದಾರೆ. … ಅದನ್ನು ಮಾಡಲಾಗುತ್ತದೆ ಎಂದು ನಾನು ಖಚಿತಪಡಿಸಿಕೊಳ್ಳುತ್ತೇನೆ." ಆದ್ದರಿಂದ, ಸಂರಕ್ಷಿತ ಅರಣ್ಯ ಭೂಮಿಯನ್ನು ಅತಿಕ್ರಮಿಸುವ ಅಕ್ರಮವನ್ನು ಮುಸ್ಲಿಂ ವೀಟೋ ಮೂಲಕ ಕ್ರಮಬದ್ಧಗೊಳಿಸಲು ಪ್ರಯತ್ನಿಸಲಾಗಿದೆ. ಕರ್ನಾಟಕ ಎಚ್ಚೆತ್ತುಕೊಂಡು ಕಾಂಗ್ರೆಸ್‌ಗೆ ಮತ ಹಾಕಬಾರದು.',ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವೀಟೋ ಎಂದರೆ, ಕಾನೂನು ರೂಪಿಸುವ ಸಂಸ್ಥೆಯಿಂದ ಮಾಡಿದ ನಿರ್ಧಾರ ಅಥವಾ ಪ್ರಸ್ತಾಪವನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು.

English summary :Ishwar Khandre Maga won only because of our Muslim votes - Minister Jameer Ahmed

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...