Sat,Mar15,2025
ಕನ್ನಡ / English

ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ | JANATA NEWS

12 Jul 2024
1109

ಮೈಸೂರು : ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್‌ ಸರ್ಕಾರದ ಹಗರಣದ ವಿರುದ್ಧ ಬಿಜೆಪಿ ಧ್ವನಿಯೆತ್ತಿದ್ದು, ಹೋರಾಟ ಹತ್ತಿಕ್ಕುವ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಪ್ರತಿಭಟಿಸುವ ಬಿಜೆಪಿ ಕಾರ್ಯಕರ್ತರನ್ನು ಮುಡಾ ಕಚೇರಿ ಬಳಿಯೇ ಬಂಧಿಸಬಹುದಿತ್ತು. ಆದರೆ, ಬೆಂಗಳೂರಿನಲ್ಲಿ ಬಂಧಿಸಿದ್ಯಾಕೆ? ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಸರ್ಕಾರದ ಬಹುಕೋಟಿ ಹಗರಣ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಂದ ಹೊರಟಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈವಿಜಯೆಂದ್ರ ಅವರನ್ನು ಇತರೆ ಮುಖಂಡರೊಂದಿಗೆ ರಾಜ್ಯ ಪೊಲೀಸರು ಬೆಂಗಳೂರಿನ ಕೆಂಗೇರಿ ಬಳಿ ಬಂಧಿಸಿದ್ದಾರೆ.

ಪ್ರತಿಭಟನಾ ನಿರತ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಮಾರ್ಗದ ಮಧ್ಯೆ ಬಂಧಿಸಲಾಗುತ್ತಿದೆ ಎಂಬ ವಿಷಯವನ್ನು ತಿಳಿದು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಡಾ. ಅಶ್ವತನಾರಾಯಣ ಜತೆಗೂಡಿ ಬೆಂಗಳೂರಿನಿಂದ ಟಾಟಾ ಏಸ್‌ ಮೂಲಕ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

"ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ. ಪ್ರತಿಭಟನಾ ನಿರತ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಲಾಗುತ್ತಿದೆ. ಈ ವಿಷಯವನ್ನು ತಿಳಿದು, ಮಾನ್ಯ ವಿರೋಧ ಪಕ್ಷದ ನಾಯಕರಾದ
ಶ್ರೀ ಆರ್.ಅಶೋಕ್ ಜತೆಗೂಡಿ ಬೆಂಗಳೂರಿನಿಂದ ಟಾಟಾ ಏಸ್‌ ಮೂಲಕ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲಾಯಿತು. ಸ್ವಾತಂತ್ರ್ಯಾ ಪೂರ್ವದಲ್ಲಿ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಈ ರೀತಿ ಹೋರಾಟ ನಡೆಸುವ ಪರಿಸ್ಥಿತಿ ಇತ್ತು. ಆದರೆ, ಸರ್ವಾಧಿಕಾರಿ ಕಾಂಗ್ರೆಸ್‌ ಸರ್ಕಾರ ಅಂತಹದ್ದೇ ರೀತಿಯ ವಾತಾವರಣವನ್ನು ಮರುಸೃಷ್ಟಿ ಮಾಡಿದೆ. ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ತಡೆಯಲು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡರೆ ಸಾಮೂಹಿಕವಾಗಿ ಜೈಲ್‌ ಭರೋ ಚಳುವಳಿ ಮಾಡಬೇಕಾಗುತ್ತದೆ ಎಚ್ಚರ! ಮುಡಾ ಹಗರಣದಿಂದ ನುಣುಚಿಕೊಳ್ಳಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ತಕ್ಷಣ ರಾಜಿನಾಮೆ ನೀಡಬೇಕು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು.", ಎಂದು ಡಾ.ಅಶ್ವತನಾರಾಯಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary :Undeclared emergency imposed in the state to protect Siddaramaiah from the Muda scam - Dr. Ashwathanarayan

ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ

ನ್ಯೂಸ್ MORE NEWS...