Sat,Apr11,2026
ಕನ್ನಡ / English

ವಯನಾಡ್ ಭೂಕುಸಿತ ದುರಂತವು ಮಾನವ ನಿರ್ಮಿತ ದುರಂತ ಮತಬ್ಯಾಂಕ್ ರಾಜಕಾರಣ ಇದಕ್ಕೆ ಕಾರಣ - ಸಂಸದ ಸೂರ್ಯ | JANATA NEWS

01 Aug 2024

ನವದೆಹಲಿ : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬುಧವಾರ ವಯನಾಡ್ ಭೂಕುಸಿತದ ಕುರಿತು ವಯನಾಡ್ ಮಾಜಿ ಸಂಸದ ಮತ್ತು ಲೋಪಿ ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಸಂಸದ ಸೂರ್ಯ, 'ರಾಹುಲ್ ಗಾಂಧಿ ವಯನಾಡ್ ಸಂಸದರಾಗಿದ್ದಾಗಿನಿಂದ ಕಳೆದ 1,800 ದಿನಗಳಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಒಮ್ಮೆಯೂ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಪ್ರಸ್ತಾಪಿಸಿಲ್ಲ' ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್ತಿನಲ್ಲಿ ಮಾತನಾಡಿ, ವಯನಾಡ್ ಭೂಕುಸಿತ ದುರಂತವು ಮಾನವ ನಿರ್ಮಿತ ದುರಂತವಾಗಿದ್ದು, ಪರಿಸರ ಸೂಕ್ಷ್ಮ ಪ್ರದೇಶದ ಅತಿಕ್ರಮಣ ಮತ್ತು ವಾಣಿಜ್ಯ ಶೋಷಣೆಗೆ ಅವಕಾಶ ನೀಡಿದ ಕೇರಳ ಸರ್ಕಾರದ "ಮತಬ್ಯಾಂಕ್ ರಾಜಕಾರಣ" ಇದಕ್ಕೆ ಕಾರಣ ಎಂದು ಹೇಳಿದರು.

ವಯನಾಡಿನ ಮಾಜಿ ಸಂಸದರು ಈ ಹಿಂದೆ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರೂ ಒಮ್ಮೆಯೂ ಸಂಸತ್ತಿನಲ್ಲಿ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಸೂರ್ಯ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದ ಸೂರ್ಯ, ಕಾಂಗ್ರೆಸ್ ನ ಮಾಜಿ ಸಂಸದ ಪಿ.ಟಿ. ಥಾಮಸ್ ಪಶ್ಚಿಮಘಟ್ಟ ಸಂರಕ್ಷಣೆಯಲ್ಲಿ ದಿಟ್ಟ ನಿಲುವು ತಳೆದಿದ್ದ ಅವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಇಡುಕ್ಕಿಯಿಂದ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿದೆ, ಎಂದು ಆರೋಪಿಸಿದ್ದಾರೆ.

"ಐಐಟಿ ದೆಹಲಿ ವರದಿಯು, ಜನವರಿ 2024 ರಲ್ಲಿ, ವಯನಾಡ್‌ನ 58.2 ಪ್ರತಿಶತ ಪ್ರದೇಶವು 'ಹೆಚ್ಚರಿಂದ ಅತಿಹೆಚ್ಚು' ಅಪಾಯದ ವರ್ಗಕ್ಕೆ ಸೇರಿದೆ ಎಂದು ಗುರುತಿಸಿದೆ ಮತ್ತು ಸ್ಥಳಾಂತರಿಸಲು ಶಿಫಾರಸು ಮಾಡಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು 2020 ರಲ್ಲಿ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಿಂದ ವಿಶೇಷವಾಗಿ ಪಶ್ಚಿಮ ಘಟ್ಟಗಳ ಪೂರ್ವ ಇಳಿಜಾರಿನಲ್ಲಿರುವ 4,000 ಕುಟುಂಬಗಳನ್ನು ಸ್ಥಳಾಂತರಿಸಲು ಸಲಹೆ ನೀಡಿದೆ. 2011 ಮತ್ತು 2013 ರಲ್ಲಿ ಎರಡು ತಜ್ಞರ ಸಮಿತಿಯ ವರದಿಗಳು ಇಂದು ದುರಂತ ಸಂಭವಿಸಿದ ಪ್ರದೇಶವನ್ನು ಪರಿಸರ-ಸೂಕ್ಷ್ಮ ವಲಯಗಳ ಪಟ್ಟಿಗೆ ಸೇರಿಸಬೇಕು ಮತ್ತು ಪ್ರದೇಶದ ಮತ್ತಷ್ಟು ವಾಣಿಜ್ಯೀಕರಣವನ್ನು ನಿಲ್ಲಿಸಬೇಕು ಎಂದು ಶಿಫಾರಸು ಮಾಡಿದೆ. ಆದರೆ ವಿವಿಧ ಧಾರ್ಮಿಕ ಸಂಘಟನೆಗಳ ಒತ್ತಡಕ್ಕೆ ಮಣಿದು ಈ ಪ್ರದೇಶದಲ್ಲಿ ಯಾವುದೇ ಅಕ್ರಮ ಒತ್ತುವರಿಗಳನ್ನು ತೆಗೆದುಹಾಕಿಲ್ಲ ಅಥವಾ ಅತಿರೇಕದ ನಿರ್ಮಾಣ ಅಥವಾ ಗಣಿಗಾರಿಕೆಯನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸೂರ್ಯ ಆರೋಪಿಸಿದ್ದಾರೆ.

English summary :Wayanad landslide disaster is a man-made disaster due to vote bank politics - MP Surya

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...