Tue,May26,2026
ಕನ್ನಡ / English

ಮಳೆ ಹಾನಿ ಪ್ರದೇಶಗಳಿಗೆ ಡಿಸಿಎಂ ಭೇಟಿ : ಒಳಚರಂಡಿ ಹಾಗೂ ರಸ್ತೆ ಬದಿ ಚರಂಡಿಗಳ ಸ್ವಚ್ಚಗೊಳಿಸಲು ಸೂಚನೆ | JANATA NEWS

12 Aug 2024

ಬೆಂಗಳೂರು : ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು.

ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗೇಶ್ವರ ನಗರದ ಮೇಲ್ಸೇತುವೆ ಬಳಿ ನೀರಿನ ಹರಿವು ಹಾಗೂ ರಾಜಕಾಲುವೆ ವೀಕ್ಷಣೆ ಮಾಡಿ “ನೀರು ಹರಿವಿಗೆ ತೊಂದರೆ ಏಕೆ ಉಂಟಾಗಿದೆ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. “ಕಾಮಗಾರಿಗಳು ನಡೆದ ನಂತರ ಕಟ್ಟಡ ತ್ಯಾಜ್ಯಗಳನ್ನು ಸ್ಥಳದಲ್ಲೇ ಏಕೆ ಬಿಡಲಾಗಿದೆ? ಕೂಡಲೇ ಎಲ್ಲಾ ಕಡೆ ಸ್ವಚ್ಚಗೊಳಿಸಿ” ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿ ಮಾತನಾಡಿದ ಅವರು “ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಚತೆಯಲ್ಲಿ ನಿರ್ಲಕ್ಷ್ಯವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್ ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಲಾಗಿದೆ” ಎಂದರು.

ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ ಮರ ಬಿದ್ದ ಕಾರಣಕ್ಕೆ ನಾಲ್ವರು ಗಾಯಗೊಂಡಿದ್ದರು. ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಹಾಗೂ ಗಾಯಾಳುಗಳ ಎಲ್ಲಾ ಖರ್ಚು ವೆಚ್ಚಗಳನ್ನು ಬಿಬಿಎಂಪಿಯಿಂದ ಭರಿಸಲಾಗುವುದು” ಎಂದು ತಿಳಿಸಿದರು.

ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಲಾಗಿವೆ. ಇವುಗಳನ್ನು ಕೂಡಲೇ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರಿಗೂ ಎಲ್ಲಿಲ್ಲಿ ರಸ್ತೆಗುಂಡಿಗಳಿವೆ ಅದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇನೆ. ಈಗಾಗಲೇ ನೂತನ ಆಪ್ ಅನ್ನು ಬಿಡುಗಡೆ ಮಾಡಿದ್ದು ಅಲ್ಲಿ ಫೋಟೊ ತೆಗೆದು ಹಾಕಿದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ಎಲ್ಲಾ ಕಡೆ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ತೀರ್ಮಾನ ಮಾಡಲಾಗಿದೆ. ಅಲ್ಲದೇ ಅನೇಕ ಕಡೆ ರಸ್ತೆ ಫುಟ್ ಪಾತ್ ಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯಲಾಗಿದೆ. ಇದರ ಬಗ್ಗೆ ಕ್ರಮವಹಿಸಲಾಗುವುದು. ಇದರಿಂದ ಮೋರಿ ಮುಚ್ಚಿಕೊಳ್ಳುವುದು, ನೀರಿನ ಹರಿವಿಗೆ ತೊಂದರೆ ಉಂಟಾಗುತ್ತಿದೆ. ಅನೇಕ ಉದ್ಯಾನಗಳಲ್ಲೂ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ಬಗ್ಗೆ ಗಮನಹರಿಸಲಾಗುವುದು“ ಎಂದರು.

English summary :DCM visit to rain damaged areas: instructions to clean drainage and roadside drains

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...