Tue,May26,2026
ಕನ್ನಡ / English

ಬಾಂಗ್ಲಾದೇಶದ ರೀತಿ ಗವರ್ನರ್ ಆಫೀಸಿಗೆ ಗವರ್ನರ್ ಮನೆಗೆ ನುಗ್ಗುತ್ತೇವೆ ಕಾಂಗ್ರೆಸಿಗರು - ಕಾಂಗ್ರೆಸ್ ಎಂಎಲ್ಸಿ ಡಿಸೋಜಾ | JANATA NEWS

19 Aug 2024

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿದ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದಲ್ಲಿ ಆದ ಸ್ಥಿತಿಯಂತೆ ನಾವು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಐವಾನ್ ಡಿಸೋಜ ಎಚ್ಚರಿಕೆ ನೀಡುವ ಮೂಲಕ ಹೊಸ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿಗೆ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು, ಈ ವೇಳೆ ಬಸ್ ಗಳ ಮೇಲೆ ಕಲ್ಲು ತೂರಾಟ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಗಳಿಗೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿದೆ.

ಪ್ರತಿಭಟನೆ ನಿರತ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಈ ಸಂದರ್ಭದಲ್ಲಿ ಮಾತನಾಡಿ, ಯಾವ ರೀತಿ ಬಾಂಗ್ಲಾದೇಶದಲ್ಲಿ ಆಯಿತೋ(ದಂಗೆ, ಕೊಲೆ, ಸುಲಿಗೆ) ಅದೇ ರೀತಿ ಗವರ್ನರ್ ಆಫೀಸಿಗೆ ಗವರ್ನರ್ ಮನೆಗೆ ನುಗ್ಗುವಂತ ಕೆಲಸವನ್ನು ನಾವು ಕಾಂಗ್ರೆಸ್ಸಿಗರು ಮಾಡಿಯೇ ಮಾಡುತ್ತೇವೆ", ಎಂದು ಸ್ಪಷ್ಟವಾಗಿ ರಾಜ್ಯಪಾಲರಿಗೆ ಎಚ್ಚರಿಕೆ ನೀಡುವ ಮೂಲಕ ಹೊಸ ವಿವಾದ ಸೃಷ್ಟಿ ಮಾಡಿದ್ದಾರೆ.

ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಡಿಯೋ ವನ್ನು ಹಚ್ಚಿಕೊಂಡು, "ಸಿದ್ದರಾಮಯ್ಯ ನವರ ಅಕ್ರಮ ನಿವೇಶನ ಪಡೆದಿರುವ ಪ್ರಕರಣದಲ್ಲಿ ತನಿಖೆ ಮಾಡುವುದಕ್ಕೆ ತನಿಖಾ ಸಂಸ್ಥೆಗಳಿವೆ, ತೀರ್ಪು ನೀಡುವುದಕ್ಕೆ ನ್ಯಾಯಾಲಯವಿದೆ. ಪ್ರಶ್ನೆ ಕೇಳುವುದಕ್ಕೆ ಮಾಧ್ಯಮಗಳಿವೆ. ಇವೆಲ್ಲ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕುಗಳು. ಇದನ್ನು ಬಿಟ್ಟು ಅರಾಜಕತೆ, ದೊಂಬಿ, ಕಚೇರಿಯೊಳಗೆ ನುಗ್ಗುತ್ತೇವೆ, ಬಾಂಗ್ಲಾ ಅಧ್ಯಕ್ಷೆಗೆ ಆದ ಪರಿಸ್ಥಿತಿ ನಿಮಗೆ ಬರುತ್ತದೆ ಎಂಬ ಅನಾಗರೀಕ, ದ್ವೇಷಪೂರಿತ ಮಾತುಗಳನ್ನು ಆಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಅವರ ಮಾತುಗಳು ಅವರ ಪಕ್ಷದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಈ ಕೂಡದೆ ಡಿಸೋಜ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.", ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary :Congressmen will storm the governor office and the governor house like Bangladesh - Congress MLC DSouza

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...