Sat,Apr11,2026
ಕನ್ನಡ / English

ಬಾಂಗ್ಲಾದೇಶದ ರೀತಿ ಗವರ್ನರ್ ಆಫೀಸಿಗೆ ಗವರ್ನರ್ ಮನೆಗೆ ನುಗ್ಗುತ್ತೇವೆ ಕಾಂಗ್ರೆಸಿಗರು - ಕಾಂಗ್ರೆಸ್ ಎಂಎಲ್ಸಿ ಡಿಸೋಜಾ | JANATA NEWS

19 Aug 2024

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿದ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದಲ್ಲಿ ಆದ ಸ್ಥಿತಿಯಂತೆ ನಾವು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಐವಾನ್ ಡಿಸೋಜ ಎಚ್ಚರಿಕೆ ನೀಡುವ ಮೂಲಕ ಹೊಸ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿಗೆ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು, ಈ ವೇಳೆ ಬಸ್ ಗಳ ಮೇಲೆ ಕಲ್ಲು ತೂರಾಟ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಗಳಿಗೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿದೆ.

ಪ್ರತಿಭಟನೆ ನಿರತ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಈ ಸಂದರ್ಭದಲ್ಲಿ ಮಾತನಾಡಿ, ಯಾವ ರೀತಿ ಬಾಂಗ್ಲಾದೇಶದಲ್ಲಿ ಆಯಿತೋ(ದಂಗೆ, ಕೊಲೆ, ಸುಲಿಗೆ) ಅದೇ ರೀತಿ ಗವರ್ನರ್ ಆಫೀಸಿಗೆ ಗವರ್ನರ್ ಮನೆಗೆ ನುಗ್ಗುವಂತ ಕೆಲಸವನ್ನು ನಾವು ಕಾಂಗ್ರೆಸ್ಸಿಗರು ಮಾಡಿಯೇ ಮಾಡುತ್ತೇವೆ", ಎಂದು ಸ್ಪಷ್ಟವಾಗಿ ರಾಜ್ಯಪಾಲರಿಗೆ ಎಚ್ಚರಿಕೆ ನೀಡುವ ಮೂಲಕ ಹೊಸ ವಿವಾದ ಸೃಷ್ಟಿ ಮಾಡಿದ್ದಾರೆ.

ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಡಿಯೋ ವನ್ನು ಹಚ್ಚಿಕೊಂಡು, "ಸಿದ್ದರಾಮಯ್ಯ ನವರ ಅಕ್ರಮ ನಿವೇಶನ ಪಡೆದಿರುವ ಪ್ರಕರಣದಲ್ಲಿ ತನಿಖೆ ಮಾಡುವುದಕ್ಕೆ ತನಿಖಾ ಸಂಸ್ಥೆಗಳಿವೆ, ತೀರ್ಪು ನೀಡುವುದಕ್ಕೆ ನ್ಯಾಯಾಲಯವಿದೆ. ಪ್ರಶ್ನೆ ಕೇಳುವುದಕ್ಕೆ ಮಾಧ್ಯಮಗಳಿವೆ. ಇವೆಲ್ಲ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕುಗಳು. ಇದನ್ನು ಬಿಟ್ಟು ಅರಾಜಕತೆ, ದೊಂಬಿ, ಕಚೇರಿಯೊಳಗೆ ನುಗ್ಗುತ್ತೇವೆ, ಬಾಂಗ್ಲಾ ಅಧ್ಯಕ್ಷೆಗೆ ಆದ ಪರಿಸ್ಥಿತಿ ನಿಮಗೆ ಬರುತ್ತದೆ ಎಂಬ ಅನಾಗರೀಕ, ದ್ವೇಷಪೂರಿತ ಮಾತುಗಳನ್ನು ಆಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಅವರ ಮಾತುಗಳು ಅವರ ಪಕ್ಷದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಈ ಕೂಡದೆ ಡಿಸೋಜ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.", ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary :Congressmen will storm the governor office and the governor house like Bangladesh - Congress MLC DSouza

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...